ನಾಯಕರತ್ತ ‘ವಿಜಯೀ’ ನಡೆ; ಎಸ್.ಎಂ.ಕೃಷ್ಣರನ್ನು ಭೇಟಿ ಮಾಡಿದ ಯುವ ನಾಯಕ; 

ಬೆಂಗಳೂರು: ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಇಂದು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಆಶೀರ್ವಾದ ಮತ್ತು ಮಾರ್ಗದರ್ಶನ ಪಡೆದರು. ದಕ್ಷ ಆಡಳಿತಕ್ಕೆ ಹೆಸರಾದ ನಾಡುಕಂಡ ಶ್ರೇಷ್ಠ ರಾಜಕಾರಣಿ ಮಾಜಿ‌ ಮುಖ್ಯಮಂತ್ರಿಗಳಾದ ಶ್ರೀ ಎಸ್ ಎಂ ಕೃಷ್ಣ ಅವರನ್ನು ಭೇಟಿ ಮಾಡಿ ಆಶೀರ್ವಾದ ಪಡೆಯಲಾಯಿತು. ಅಪಾರ ಅನುಭವವುಳ್ಳ ಹಿರಿಯ ಮುತ್ಸದ್ದಿಗಳಾಗಿರುವ ತಾವು ಮಾರ್ಗದರ್ಶನ ಮಾಡಬೇಕೆಂದು ಮನವಿ ಮಾಡಲಾಯಿತು. ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಎಂ.ಕೃಷ್ಣಪ್ಪನವರು, ಶ್ರೀ ಸಿ.ಕೆ.ರಾಮಮೂರ್ತಿ ಅವರು… pic.twitter.com/xpYMWqixpp — Vijayendra Yediyurappa (Modi Ka Parivar) (@BYVijayendra) November 13, 2023 ಇದೇವೇಳೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಎಸ್.ಎಂ.ಕೃಷ್ಣ ಅವರು, ಬಿಜೆಪಿ ರಾಜ್ಯ ಅಧ್ಯಕ್ಷರಾಗಿ ಆಯ್ಕೆಯಾದ ವಿಜಯೇಂದ್ರರನ್ನು ಹಾರ್ದಿಕವಾಗಿ ಅಭಿನಂದಿಸುತ್ತೇನೆ. ಹತ್ತಾರು ವರ್ಷಗಳಿಂದ ಬಿಜೆಪಿಯನ್ನು ಕರ್ನಾಟಕದಲ್ಲಿ ಭದ್ರವಾದ ಬುನಾದಿಯ ಮೇಲೆ ಕಟ್ಟಲು ಯಡಿಯೂರಪ್ಪನವರು ಶ್ರಮಿಸಿದ್ದಾರೆ ಎಂದು ತಿಳಿಸಿದರು. ಅವರು ಕಟ್ಟಿದ…

ಕುರ್ಚಿ ಏರುವ ಮುನ್ನವೇ ಮೈತ್ರಿ ಸರ್ಕಸ್.. ಬಿಜೆಪಿ ನಿಯೋಜಿತ ಅಧ್ಯಕ್ಷರಿಂದ ದೇವೇಗೌಡ ಭೇಟಿ

ಬೆಂಗಳೂರು: ಬಿಜೆಪಿ ರಾಜ್ಯಾದ್ಯಕ್ಷರಾಗಿ ನೇಮಕವಾಗಿರುವ ಬಿ.ವೈ.ವಿಜಯೇಂದ್ರ ಅವರು ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ದೇವೇಗೌಡರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಹೆಚ್​.ಡಿ.ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ ವಿಜಯೇಂದ್ರ ಅವರು, ಮಾಜಿ ಪ್ರಧಾನಿಯವರ ಆಶೀರ್ವಾದ ಪಡೆದರು. ದೇವೇಗೌಡರ ಜೊತೆ ಮಾತುಕತೆ ನಡೆಸಿದರು. ಈ ವೇಳೆ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಉಪಸ್ಥಿತರಿದ್ದರು. ಎನ್‌ಡಿ‌ಎ ಸೇರಿರುವ ಜೆಡಿಎಸ್, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಸೀಟು ಹೊಂದಾಣಿಕೆ ಮಾಡಿಕೊಳ್ಳುವ ಸಂಬಂಧ ಚರ್ಚೆ ನಡೆದಿದ್ದು, ಇದೀಗ ಬಿ.ವೈ‌.ವಿಜಯೇಂದ್ರ ಅವರು ತಾವು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಆಲಂಕರಿಸುವ ಮುನ್ನ ದೇವೇಗೌಡರನ್ನು ಭೇಟಿಯಾಗಿ ಮಾತುಕತೆ ನಡೆಸಿರುವ ಬೆಳವಣಿಗೆ ರಾಜಕೀಯವಾಗಿ ಭಾರೀ ಮಹತ್ವ ಪಡೆದುಕೊಂಡಿದೆ. ಬಿಜೆಪಿ ಪಕ್ಷದ ನೂತನ ರಾಜ್ಯಾಧ್ಯಕ್ಷರಾದ ಶ್ರೀ @BYVijayendra ಅವರು ಇಂದು ಮಾಜಿ ಪ್ರಧಾನಮಂತ್ರಿಗಳು ಹಾಗೂ ಜನತಾದಳ ಜಾತ್ಯತೀತ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ @H_D_Devegowda ರನ್ನು ಅವರ…

ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ; ಇದು ‘ವಿಜಯದ ಹಾದಿ’ ಎಂದ ಸಂತೋಷ್

ಬೆಂಗಳೂರು: ರಾಜ್ಯ ಬಿಜೆಪಿಗೆ ನೂತನ ಸಾರಥಿಯಾಗಿ ಮಾಜಿ ಸಿಎಂ ಬಿಎಸ್‌ವೈ ಪುತ್ರ ವಿಜಯೇಂದ್ರ ನೇಮಕವಾಗಿದ್ದು ಕಮಲ ಪಾಳಯದಲ್ಲಿ ರಣೋತ್ಸಾಹ ಹೆಚ್ಚಿದೆ. ಮಾಜಿ ಸಿಎಂ ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ಅವರು ಈ ವರೆಗೂ ರಾಜ್ಯ ಬಿಜೆಪಿಯ ಉಪಾಧ್ಯಕ್ಷರಾಗಿ ಪಕ್ಷ ಸಂಘಟನೆ ಮಾಡುತ್ತಿದ್ದರು. ತಮ್ಮದೇ ಆದ ಅಭಿಮಾನಿಗಳ ಹಾಗೂ ಬೆಂಬಲಿಗರ ಸಮೂಹವನ್ನು ಹೊಂದಿರುವ ಬಿ.ವೈ.ವಿಜಯೇಂದ್ರ ಅವರು ಇದೀಗ ರಾಜ್ಯ ಬಿಜೆಪಿಯ ದಂಡನಾಯಕನಾಗುತ್ತಿದ್ದಾರೆ. ಲೋಕಸಭಾ ಚುನಾವಣಾ ಹೊಸ್ತಿಲಲ್ಲಿ ನಡೆದಿರುವ ಈ ಬೆಳವಣಿಗೆ ಕಮಲ ಪಾಳಯದಲ್ಲಿ ಕಾರ್ಯಕರ್ತರ ಉತ್ಸಾಹವನ್ನು ಹೆಚ್ಚಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕವಾಗಿರುವ ವಿಜಯೇಂದ್ರ ಅವರಿಗೆ ಅಭಿನಂದನೆಗಳ ಮಹಾಮಳೆಯಾಗುತ್ತಿದೆ. ವಿಜಯೇಂದ್ರ ಅವರ ನೇಮಕವು ಬಿಜೆಪಿ ಪಾಲಿಗೆ ‘ವಿಜಯದ ಹಾದಿ’ ಎಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಬಣ್ಣಿಸಿದ್ದಾರೆ. ಟ್ವಿಟರ್‌ನಲ್ಲಿ ಅಭಿನಂದನೆಯ ಪೋಸ್ಟ್ ಹಾಕಿರುವ ಅವರು, ‘ಪಕ್ಷವನ್ನು ವಿಜಯದ ಹಾದಿಯಲ್ಲಿ ನಡೆಸುವಲ್ಲಿ ಯಶಸ್ಸು ನಿಮ್ಮದಾಗಲಿ’ ಎಂದು ಶುಭ ಹಾರೈಸಿದ್ದಾರೆ. ಅಭಿನಂದನೆಗಳು…

ಬಿಎಸ್‌ವೈ ಪುತ್ರ ‘ವಿಜಯೀಭವ’: ಬಿಜೆಪಿಯಲ್ಲಿ ರಣೋತ್ಸಾಹ..

ಗದಗ್: ರಾಜ್ಯ ಬಿಜೆಪಿಗೆ ನೂತನ ಸಾರಥಿಯಾಗಿ ಮಾಜಿ ಸಿಎಂ ಬಿಎಸ್‌ವೈ ಪುತ್ರ ವಿಜಯೇಂದ್ರ ನೇಮಕವಾಗಿದ್ದು ಕಮಲ ಪಾಳಯದಲ್ಲಿ ರಣೋತ್ಸಾಹ ಹೆಚ್ಚಿದೆ. ಛಲಗಾರ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರು ಈ ವರೆಗೂ ರಾಜ್ಯ ಬಿಜೆಪಿಯ ಉಪಾಧ್ಯಕ್ಷರಾಗಿ ಪಕ್ಷ ಸಂಘಟನೆ ಮಾಡುತ್ತಿದ್ದರು. ತಮ್ಮದೇ ಆದ ಅಭಿಮಾನಿಗಳ ಹಾಗೂ ಬೆಂಬಲಿಗರ ಸಮೂಹವನ್ನು ಹೊಂದಿರುವ ಬಿ.ವೈ.ವಿಜಯೇಂದ್ರ ಅವರು ಇದೀಗ ರಾಜ್ಯ ಬಿಜೆಪಿಯ ದಂಡನಾಯಕನಾಗುತ್ತಿದ್ದಾರೆ. ಲೋಕಸಭಾ ಚುನಾವಣಾ ಹೊಸ್ತಿಲಲ್ಲಿ ನಡೆದಿರುವ ಈ ಬೆಳವಣಿಗೆ ಕಮಲ ಪಾಳಯದಲ್ಲಿ ಕಾರ್ಯಕರ್ತರ ಉತ್ಸಾಹವನ್ನು ಹೆಚ್ಚಿಸಿದೆ. ಭಾರತೀಯ ಜನತಾ ಪಾರ್ಟಿ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಅವರು ನೇಮಕಗೊಂಡಿರುವ ಹಿನ್ನೆಲೆಯಲ್ಲಿ ಗದಗ್‌ನ ಹುಯಿಲಗೋಳ ನಾರಾಯಣ್ ವೃತ್ತದಲ್ಲಿ ಪಕ್ಷದ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು. ನಗರಸಭಾ ಸದಸ್ಯರುಗಳಾದ ಸಾಯಿ ಸಮಿತಿ ಅಧ್ಯಕ್ಷರಾದ ಅನಿಲ ಅಬ್ಬಿಗೇರಿ.ಮಧುಸಾ ಮೆಹರ್ವಾಡಿ. ವಿನಾಯಕ ಮಾನ್ವಿ.ನಾಗರಾಜ್ ತಲ್ವಾರ್. ಮಾಂತೇಶ್ ನೆಲವಡಿ. ಎಂ ಎಂ ಹಿರೇಮಠ. ಕಾಂತಿಲಾಲ್ ಬಂಸಾಲಿ. ಸುಧೀರ್ ತಾಟಿಗರ್.…