ಬಾಂಗ್ಲಾದೇಶ ಹಿಂಸಾಚಾರ ಬಗ್ಗೆ ಬ್ರಿಟೀಷ್ ಲೇಬರ್ ಪಾರ್ಟಿ ಕಳವಳ; ಶೀಘ್ರ ಶಾಂತಿ ಸ್ಥಾಪನೆಗೆ ಡಾ.ನೀರಜ್ ಪಾಟೀಲ್ ಕರೆ

📝 ಜಯ ಪ್ರಕಾಶ್ ಲಂಡನ್: ಭೀಕರ ಹಿಂಸಾಚಾರದಿಂದ ಬಾಂಗ್ಲಾದೇಶ ತ್ತರಿಸಿದೆ. ಉದ್ಯೋಗ ನೀತಿ ವಿರುದ್ದ ವಿದ್ಯಾರ್ಥಿಗಳು ಹಾಗೂ ವಿರೋಧ ಪಕ್ಷಗಳು ದಂಗೆ ಎದ್ದಿದ್ದು ನಿರಂತರ ಹಿಂಸಾಚಾರದಿಂದಾಗಿ ನೂರಾರು ಮಂದಿ ಬಲಿಯಾಗಿದ್ದಾರೆ. ಈ ಹಿಂಸಾಚರದಿಂದ ಬೆಚ್ಚಿದ ಶೇಖ್ ಹಸೀನಾ ಅವರು ಪ್ತಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ಭಾರತಕ್ಕೆ ಪಲಾಯನವಾಗಿದ್ದಾರೆ. ಬಾಂಗ್ಲಾದೇಶದ ಈ ಪರಿಸ್ಥಿತಿ ಬಗ್ಗೆ ಲಂಡನ್‌‌ನಲ್ಲಿರುವ ಬ್ರಿಟಿಷ್ ಲೇಬರ್ ಪಾರ್ಟಿ ಕಳವಳ ವ್ಯಕ್ತಪಡಿಸಿದೆ. ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಬ್ರಿಟಿಷ್ ಲೇಬರ್ ಪಾರ್ಟಿ ನಾಯಕರೂ ಆದ, ಭಾರತ ಮೂಲದ ಮಾಜಿ ಲಂಡನ್ ಮೇಯರ್ ಡಾ.ನೀರಜ್ ಪಾಟೀಲ್, ಬಾಂಗ್ಲಾದೇಶದಲ್ಲಿ ಶೀಘ್ರ ಶಾಂತಿ ಮರುಸ್ಥಾಪಿಸಲು ವಿಶ್ವ ಸಮುದಾಯ ಸಹಕಾರ ನೀಡಬೇಕಿದೆ ಎಂದು ಪ್ರತಿಪಾದಿಸಿದ್ದಾರೆ. ಬಾಂಗ್ಲಾದೇಶ ಸಂಸತ್ತು ವಿಸರ್ಜನೆಯಾಗಿದೆ, ಅದರ ಪ್ರಧಾನಿ ಈಗ ದೆಹಲಿಯಲ್ಲಿದ್ದಾರೆ. ಮುಂದಿನ ಮೂರು ತಿಂಗಳೊಳಗೆ ಚುನಾಯಿತ ಸರ್ಕಾರವನ್ನು ಮರುಸ್ಥಾಪಿಸುವ ಭರವಸೆಯೊಂದಿಗೆ ಮಿಲಿಟರಿ ಸ್ವಾಧೀನವಿದೆ. ಇದು ವಿಕಸನಗೊಳ್ಳುತ್ತಿರುವ ಪರಿಸ್ಥಿತಿಯಾಗಿದೆ ಮತ್ತು…