ಬಿಜೆಪಿಯಲ್ಲಿ ವ್ಯಕ್ತಿಗೆ ಸ್ಥಾನವಲ್ಲ, ಕಾರ್ಯಕರ್ತನಿಗೆ ಸ್ಥಾನ; ‘ಅಭ್ಯರ್ಥಿ ನಾನೇ ಎಂದು’ ಹೇಳಲಾಗಲ್ಲ; ನಳಿನ್ ಕುಮಾರ್ ಕಟೀಲ್

ಮಂಗಳೂರು: ಬಿಜೆಪಿ ಬಂಟ್ವಾಳ ಮಂಡಲ ಕಾರ್ಯ ನಿರ್ವಹಣಾ ತಂಡದ ಸಭೆಯು ಸ್ಪರ್ಶ ಕಲಾಮಂದಿರದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ದೇವಪ್ಪ ಪೂಜಾರಿಯವರು ಪ್ರಾಸ್ತಾವಿಕ ನುಡಿಗಳೊಂದಿಗೆ ಬಂಟ್ವಾಳ ಮಂಡಲದಲ್ಲಿ ಬಿಜೆಪಿಯ ಇತೀಚಿನ ಸಂಘಟನಾತ್ಮಕ ಕಾರ್ಯ ಚಟುವಟಿಕೆಗಳ ಮಾಹಿತಿ ನೀಡಿದರು. ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರು ಭಾಗವಹಿಸಿ ಮಾತಾಡುತ್ತಾ “ಬಿಜೆಪಿ ರಾಷ್ಟ್ರಭಕ್ತ ಕಾರ್ಯಕರ್ತರ ಪಾರ್ಟಿಯಾಗಿದ್ದು, ರಾಷ್ಟ್ರಹಿತಕ್ಕಾಗಿ ಬಿಜೆಪಿಯ ತತ್ವ ಸಿದ್ಧಾಂತಗಳನ್ನು ಮೈಗೂಡಿಸಿಕೊಂಡು ನಮ್ಮ ಹಿರಿಯರು ಶ್ರಮಿಸಿ ಕಟ್ಟಿದ ಪಾರ್ಟಿ ಬಿಜೆಪಿ. ಹಾಗಾಗಿ ಜವಾಬ್ದಾರಿಯ ಕಾರ್ಯಕರ್ತರಾದ ನಮಗೆ ಕಮಲದ ಚಿಹ್ನೆ ಮಾತ್ರ ನಮ್ಮ ಕಣ್ಮುಂದೆ ಇರುತ್ತೆ ಹೊರತು ವ್ಯಕ್ತಿಯಲ್ಲ ಎಂದರು. ನಾನೇ ಅಭ್ಯರ್ಥಿ’ ಎಂಬ ವಾದ ಅಪ್ರಸ್ತುತ: ಬಿಜೆಪಿಯಲ್ಲಿ ಮಾತ್ರ ಸಾಮಾನ್ಯ ಕಾರ್ಯಕರ್ತರು ಉನ್ನತವಾದ ಸ್ಥಾನವನ್ನು ಪಡೆಯುವುದಕ್ಕೆ ಸಾಧ್ಯ. ಇಲ್ಲಿ ಪಕ್ಷಕ್ಕಾಗಿ ಶ್ರಮಿಸುವ ಕಟಿಬದ್ಧ ಕಾರ್ಯಕರ್ತ ಶಾಸಕನಾಗಬಹುದು ಅಥವಾ ಸಂಸದನಾಗಬಹುದು. ಆದರೆ ನಾನೇ ಅಭ್ಯರ್ಥಿ ಎಂದು ಹೇಳಿಕೊಂಡು…