ಪಿಯುಸಿ ಮೌಲ್ಯಮಾಪಕರಿಗೆ ಸಿಗದ ಸಂಭಾವನೆ, ಭತ್ಯೆ.. ಅ.3ರಂದು ಪ್ರತಿಭಟನೆ ನಡೆಸುವ ಎಚ್ಚರಿಕೆ

ಪಿಯುಸಿ ಮೌಲ್ಯಮಾಪಕರಿಗೆ ಸಿಗದ ಸಂಭಾವನೆ, ಭತ್ಯೆ.. ವಿಳಂಬ ನೀತಿ ವಿರುದ್ಧ ರಂಗನಾಥ್ ಆಕ್ರೋಶ.. ಅಕ್ಟೊಬರ್ ೩ ರಂದು ಪ್ರತಿಭಟನೆ ನಡೆಸುವ ಎಚ್ಚರಿಕೆ ಬೆಂಗಳೂರು: ಕಳೆದ ಮಾರ್ಚ್-ಏಪ್ರಿಲ್’ನಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ಮತ್ತು ಮೌಲ್ಯಮಾಪನ ಕಾರ್ಯ, ಜೂನ್’ನಲ್ಲಿ ನಡೆದ ಮೊದಲ ಪೂರಕ ಪರೀಕ್ಷೆ ಮತ್ತು ಮೌಲ್ಯಮಾಪನ ಕಾರ್ಯ ಹಾಗೂ ಆಗಸ್ಟ್-ಸೆಪ್ಟೆಂಬರ್’ನಲ್ಲಿ ನಡೆದ 2ನೇ ಪೂರಕ ಪರೀಕ್ಷೆ ಮತ್ತು ಮೌಲ್ಯಮಾಪನ ಕಾರ್ಯಗಳಲ್ಲಿ ಭಾಗಿಯಾದ ಉಪನ್ಯಾಸಕರ ಸಂಭಾವನೆ ಮತ್ತು ಭತ್ಯೆಗಳನ್ನು ಈವರೆಗೂ ಸಂಪೂರ್ಣವಾಗಿ ಬಿಡುಗಡೆ ಮಾಡದಿರುವ ಬಗ್ಗೆ ಬೆಂಗಳೂರು ಬಾರ್ ಕೌನ್ಸಿಲ್ ಮಾಜಿ ಅಧ್ಯಕ್ಷರೂ ಆದ ಹಿರಿಯ ವಕೀಲ ಎ.ಪಿ.ರಂಗನಾಥ್ ಅಸಮಾಧಾನ ಹೊರಹಾಕಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು‌ ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರಿಗೆ ಪತ್ರ ಬರೆದಿರುವ ಎ.ಪಿ.ರಂಗನಾಥ್, ಜರೂರಾಗಿ ಮೌಲ್ಯಮಾಪನ ಮಾಡಿಸಿ, ಶೀಘ್ರದಲ್ಲಿ ಫಲಿತಾಂಶ ಬಿಡುಗಡೆ ಮಾಡಿದ್ದೇವೆಂದು ಹೆಮ್ಮೆ ಪಡುವ ಮಂಡಲಿಯು ಪರೀಕ್ಷೆ ಮತ್ತು ಮೌಲ್ಯಮಾಪನ ಕಾರ್ಯದಲ್ಲಿ…