ವಾಸುದೇವನಹಳ್ಳಿ ಬಳಿ ಚೆಕ್ ಡ್ಯಾಂ ನಿರ್ಮಾಣ: ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ಹೆಗ್ಗಡಿಹಳ್ಳಿ ಗ್ರಾಮ ಪಂಚಾಯಿತಿ ದಂಡುದಾಸನಕೊಡಿಗೆಹಳ್ಳಿ, ವಾಸುದೇವನಹಳ್ಳಿ ಗ್ರಾಮದ ಬಳಿ 50 ಲಕ್ಷ ರೂಪಾಯಿ ಅನುದಾನದಲ್ಲಿ ಚೆಕ್ ಡ್ಯಾಂ ನಿರ್ಮಾಣಕ್ಕೆ ಗುರುವಾರ ಗುದ್ದಲಿ ಪೂಜೆ ಮಾಡಲಾಯಿತು. ಕಾಂಗ್ರೆಸ್ ಜಿಲ್ಲಾ ಪರಿಶಿಷ್ಟ ಪಂಗಡ ಘಟಕದ ಅಧ್ಯಕ್ಷ ಮುನಿಕೃಷ್ಣಪ್ಪ ಮಾತನಾಡಿ, ಈ ಭಾಗದ ಹಲವು ಗ್ರಾಮಗಳಲ್ಲಿ ನೀರಿನ ಅಭಾವ ಬಹಳಷ್ಟು ಇದ್ದು, ಈ ಸಮಸ್ಯೆಯನ್ನು ನೀಗಿಸಲು ಹಲವು ವರ್ಷಗಳಿಂದ ಪಂಚಾಯತಿ ಅಧಿಕಾರಿಗಳು ಹಾಗೂ ಸದಸ್ಯರು ಸಾಕಷ್ಟು ಪ್ರಯತ್ನ ಪಡುತ್ತಿದ್ದರು. ಈ ವಿಚಾರವಾಗಿ ಈಗಾಗಲೇ ಅನೇಕ ಬಾರಿ ಚರ್ಚೆಗಳಾಗಿದ್ದರೂ, ಸಹ ಇದಕ್ಕೊಂದು ಶಾಶ್ವತ ಪರಿಹಾರ ಕಲ್ಪಿಸಲು ಸಾಧ್ಯವಾಗಿರಲಿಲ್ಲ. ಇಂದು ಸಣ್ಣ ನಿರಾವರಿ ಇಲಾಖಾ ವತಿಯಿಂದ ೫೦ ಲಕ್ಷ ರೂಪಾಯಿಯಲ್ಲಿ ಚೆಕ್ ಡ್ಯಾಂ ನಿರ್ಮಾಣ ಮಾಡುತ್ತಿರುವುದು ಈ ಭಾಗದ ರೈತರಿಗೆ ಕೃಷಿಯ ನಿರಾವರಿಗೆ ಅನುಕೂಲವಾಗಲಿದೆ. ಸುತ್ತಮುತ್ತಲಿನ ಪ್ರದೇಶದಲ್ಲಿ ಅಂತರ್ಜಲವು ವೃದ್ಧಿಯಾಗುತ್ತದೆ ಎಂದರು. ಸಣ್ಣ ನಿರಾವರಿ ಇಂಜಿನಿಯರ್ ನವೀನ್ ಕುಮಾರ್, ಪಿಡಿಓ ಸೌಮ್ಯ,…