‘ಎಲ್ಲೆ ಮೀರಿ ಭಾಷೆ ಬಳಸಿ ಟೀಕೆ ಮಾಡುವ ಸಂಪ್ರದಾಯ ಕೈಬಿಡಿ’; ಬಿಜೆಪಿ ನಾಯಕರಿಗೆ ರಮೇಶ್ ಬಾಬು ಕಿವಿಮಾತು

ಬೆಂಗಳೂರು: ‘ಎಲ್ಲೆ ಮೀರಿ ಭಾಷೆ ಬಳಸಿ ಟೀಕೆ ಮಾಡುವ ಸಂಪ್ರದಾಯ ಕೈಬಿಡಿ’ ಎಂದು ಬಿಜೆಪಿ ನಾಯಕರಿಗೆ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಕಿವಿಮಾತು ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಬಾಬು, ಯಾವುದೇ ಪಕ್ಷವಾದರೂ ಎಲ್ಲೆಯನ್ನು ಮೀರಿ ಭಾಷೆಯನ್ನು ಬಳಸಿ ಟೀಕೆ ಮಾಡುವ ಸಂಪ್ರದಾಯ ನಮ್ಮ‌ ರಾಜ್ಯದಲ್ಲಿ ಇಲ್ಲ. ಆದರೆ ಕಳೆದ ಐದಾರು ವರ್ಷಗಳಿಂದ ಭಾರತೀಯ ಜನತಾ ಪಕ್ಷದಲ್ಲಿ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಳವಾಗಿದೆ. ಟೀಕೆ ಮಾಡಿದರೆ ರಾತ್ರೋರಾತ್ರಿ ನಾಯಕರಾಗಬಹುದು ಎಂದು ತರಬೇತಿ ಪಡೆಯುತ್ತಿದ್ದಾರೆ. ಈ ತರಬೇತಿಯನ್ನು ಕೇಶವ ಕೃಪಾ, ಬೈಠಕ್ ಹೀಗೆ ಎಲ್ಲಿ ನೀಡಲಾಗುತ್ತಿದೆ ಎಂದು ಸಂಘ- ಪರಿವಾರದವರೇ ಹೇಳಬೇಕು ಎಂದು ಪ್ರತಿಪಾದಿಸಿದರು. ಸದಾ ವತ್ಸಲೇ ಮಾತೃಭೂಮಿ ಎಂದು ರಾಜಕೀಯ ಮಾಡುತ್ತಿದ್ದವರು ಈಗ ಸದಾ ಬೈಯುವುದೇ ರಾಜಕೀಯ ಎಂದುಕೊಂಡಿದ್ದಾರೆ. ಇದಲ್ಲೆ ಛಲವಾದಿ ನಾರಾಯಣಸ್ವಾಮಿ ಅವರೇ ಉದಾಹರಣೆ. ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಅತ್ಯಂತ…

ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ಗಣತಿ: ಕೇಂದ್ರದ ನಿರ್ಧಾರಕ್ಕೆ ‘ರಾಹುಲ್ ಸ್ಫೂರ್ತಿ’ ಎಂದ ಕೈ ನಾಯಕರು

ಬೆಂಗಳೂರು: ಮುಂದಿನ ರಾಷ್ಟ್ರೀಯ ಜನಗಣತಿಯಲ್ಲಿ ಜಾತಿ ಜನಗಣತಿಯನ್ನು ಸೇರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ರಾಜಕೀಯ ವ್ಯವಹಾರಗಳ ಸಂಪುಟ ಸಮಿತಿಯ ಸಭೆಯ ತೀರ್ಮಾನ ಬಗ್ಗೆ ಸಿಎಂ ಸಿದ್ದರಾಮಯ್ಯ ತಮ್ಮದೇ ದಾಟಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. ಜಾತಿ ಗಣತಿ ನಡೆಸುವುದರಿಂದ ಜಾತಿ ಸಂಘರ್ಷಗಳು ಹೆಚ್ಚಾಗಿ ಸಮಾಜ ಒಡೆದುಹೋಗುತ್ತದೆ, ಜಾತಿ ಗಣತಿ ಎನ್ನುವುದು ಹಿಂದೂ ಸಮಾಜವನ್ನು ಒಡೆಯುವ ಹುನ್ನಾರ ಎಂದೆಲ್ಲ ವರ್ಷಗಳ ಕಾಲ ಟೀಕಾಪ್ರಹಾರ ಮಾಡುತ್ತಾ ಬಂದ ಬಿಜೆಪಿ, ಪಕ್ಷ ಮತ್ತು ಅದರ ನೇತೃತ್ವದ ಸರ್ಕಾರಗಳು ಕೊನೆಗೂ ಜಾತಿ ಗಣತಿಯ ಸಾಮಾಜಿಕ ಮಹತ್ವವನ್ನು ಅರ್ಥಮಾಡಿಕೊಂಡಿರುವುದು ಸ್ವಾಗತಾರ್ಹ ಬೆಳವಣಿಗೆ ಎಂದು ಸಿದ್ದರಾಮಯ್ಯ ಅವರು ಸಾಮಾಜಿಕ ಮಾಧ್ಯಮ ‘X’ನಲ್ಲಿ ಬರೆದುಕೊಂಡಿದ್ದಾರೆ. ಜಾತಿ ಗಣತಿ ನಡೆಸುವುದರಿಂದ ಜಾತಿ ಸಂಘರ್ಷಗಳು ಹೆಚ್ಚಾಗಿ ಸಮಾಜ ಒಡೆದುಹೋಗುತ್ತದೆ, ಜಾತಿ ಗಣತಿ ಎನ್ನುವುದು ಹಿಂದೂ ಸಮಾಜವನ್ನು ಒಡೆಯುವ ಹುನ್ನಾರ ಎಂದೆಲ್ಲ ವರ್ಷಗಳ ಕಾಲ ಟೀಕಾಪ್ರಹಾರ ಮಾಡುತ್ತಾ ಬಂದ @BJP4India ಪಕ್ಷ ಮತ್ತು ಅದರ ನೇತೃತ್ವದ…

ಸಂವಿಧಾನ ಬದಲಿಸುವ ಮಾತುಗಳನ್ನಾಡುತ್ತಾ ಬಂದವರು ಬಿಜೆಪಿಯವರು: ಹಳೆಯ ಸನ್ನಿವೇಶಗಳನ್ನು ಮುನ್ನೆಲೆಗೆ ತಂದ ರಮೇಶ್ ಬಾಬು..

ಬೆಂಗಳೂರು: ಆಗಾಗ್ಗೆ ಸಂವಿಧಾನ ಬದಲಾವಣೆಯ ಬಗ್ಗೆ ಮಾತನಾಡುತ್ತಿರುವ ಬಿಜೆಪಿ ನಾಯಕರು, ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರತ್ತ ಬೆರಳು ತೋರಿಸುವ ಮುನ್ನ ತಮ್ಮನ್ನು ತಾವೇ ನೋಡಿಕೊಳ್ಳಲಿ ಎಂದು ವಿಧಾನ ಪರಿಷತ್ತಿನ ಮಾಜಿ ಸದಸ್ಯ, ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಧ್ಯಗಳಿಗೆ ಪ್ರತಿಕ್ರಿಯೆ ನೀಡಿರುವ ರಮೇಶ್ ಬಾಬು, ಅನಾದಿ ಕಾಲದಿಂದಲೂ ಬಿಜೆಪಿ-ಆರೆಸ್ಸೆಸ್ ನಾಯಕರು ಸಂವಿಧಾನ ಬದಲಾವಣೆ ಬಾಗೆ ಹೇಳಿಕೊಂಡಿರುವ ಸನ್ನಿವೇಶಗಳ ಬಗ್ಗೆ ಗಮನಸೆಳೆದರು. ಸಂಘ ಪರಿವಾರದ ಮೂಲಭೂತ ಸಿದ್ಧಾಂತಗಳಿಗೆ ಅನುಗುಣವಾಗಿ ನಮ್ಮ ದೇಶದ ಸಂವಿಧಾನವನ್ನು ಬದಲಾಯಿಸುವ ಹಿಡನ್ ಅಜೆಂಡ ಹೊಂದಿರುವ ಬಿಜೆಪಿ, ಸಮಯಕ್ಕೆ ಅನುಗುಣವಾಗಿ ತನ್ನ ಬಣ್ಣ ಬದಲಾಯಿಸಿಕೊಂಡು ರಾಜಕೀಯ ಹೇಳಿಕೆಗಳನ್ನು ನೀಡುತ್ತಿದೆ. ಜನಸಂಘದ ಕಾಲದಿಂದಲೂ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿರುವ ಬಿಜೆಪಿ ಆಯಾ ಸಂದರ್ಭದಲ್ಲಿ ಸಂಘ ಪರಿವಾರದ ವೇದಿಕೆಗಳಲ್ಲಿ, ನಾಯಕರ ಹೇಳಿಕೆಗಳಲ್ಲಿ ನಿರಂತರವಾಗಿ ನಮ್ಮ ದೇಶದ ಸಂವಿಧಾನವನ್ನು ಮನುಸ್ಮೃತಿಗೆ ಅನುಗುಣವಾಗಿ ಮೂಲಭೂತವಾದಕ್ಕೆ ಪೂರಕವಾಗಿ ಬದಲಾವಣೆ…

ವಿರೋಧ ಪಕ್ಷದ ನಾಯಕ ಸ್ಥಾನ ಉಳಿಸಿಕೊಳ್ಳಲು ನವರಂಗಿ ಆಟ? ಅಶೋಕ್ ವಿರುದ್ಧ ರಮೇಶ್ ಬಾಬು ಟೀಕಾಸ್ತ್ರ

ಬೆಂಗಳೂರು: ಪ್ರತಿಪಕ್ಷ ನಾಯಕ ಸ್ಥಾನ ಉಳಿಸಿಕೊಳ್ಳಲು ಆರ್.ಅಶೋಕ್ ನವರಂಗಿ ಆಟ ಆಡುತ್ತಿದ್ದಾರೆ ಎಂದು ಮಾಜಿ ಶಾಸಕರೂ ಆದ ಕೆಪಿಸಿಸಿ ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಕಟುವಾಗಿ ಟೀಕಿಸಿದ್ದಾರೆ. ಚನ್ನಪಟ್ಟಣದ ಉಪಚುನಾವಣೆಯಲ್ಲಿ ಮಾತನಾಡುವಾಗ ಆರ್ ಅಶೋಕ್ ರವರು ಕಾಂಗ್ರೆಸ್ ಪಕ್ಷದ ದುರಾಡಳಿತದ ವಿರುದ್ಧ ಉಪಚುನಾವಣೆ ನಡೆಯುತ್ತಿದೆ ಎಂದು ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯನ್ನು ಖಂಡಿಸಿರುವ ರಮೇಶ್ ಬಾಬು, ಬಹುತೇಕ ಕಾಂಗ್ರೆಸ್ ಪಕ್ಷಕ್ಕೆ ಅಥವಾ ಕರ್ನಾಟಕದ ಕಾಂಗ್ರೆಸ್ ನಾಯಕರಿಗೆ ಉಪಚುನಾವಣೆಗಳನ್ನು ದುರಾಡಳಿತದ ಮೇಲೆ ನಡೆಸುವ ಅವಶ್ಯಕತೆ ಇಲ್ಲ. ಅಂತಹ ಅವಶ್ಯಕತೆ ಏನಾದರೂ ಇದ್ದರೆ ಅದು ಭಾರತೀಯ ಜನತಾ ಪಕ್ಷದ ನಾಯಕರಿಗೆ ಮತ್ತು ಅವರ ಪಕ್ಷಕ್ಕೆ ಇರುತ್ತದೆ ಎಂದು ಎದಿರೇಟು ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ಮೇಲೆ ಆರೋಪ ಮಾಡುತ್ತಿರುವುದು ಅವರ ವಿರೋಧ ಪಕ್ಷದ ನಾಯಕ ಸ್ಥಾನವನ್ನು ಉಳಿಸಿಕೊಳ್ಳುವ ಹತಾಶ ಪ್ರಯತ್ನ. ಕರ್ನಾಟಕದ ನವರಂಗಿ ವಿರೋಧ ಪಕ್ಷದ ನಾಯಕ ಆರ್ ಅಶೋಕ್…

‘ಭಾಗ್ಯಲಕ್ಷ್ಮಿ’ ಸೀರೆಯಡಿ ಅವಿತಿರುವ ಹಗರಣ; ಬಿಜೆಪಿ ನಾಯಕರ ಕರ್ಮಕಾಂಡ ಕುರಿತು ತನಿಖೆಗೆ ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರದ ಭಾಗ್ಯಲಕ್ಷ್ಮಿ ಯೋಜನೆಯಲ್ಲಿ 2010-11ನೇ ಸಾಲಿನಲ್ಲಿ ಸೀರೆ ವಿತರಣೆ ಹೆಸರಲ್ಲಿ ಸುಮಾರು 23 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಆರೋಪಿಸಿದ್ದಾರೆ. ಈ ಬಹುಕೋಟಿ ಕರ್ಮಕಾಂಡ ಕುರಿತಂತೆ SIT ತನಿಖೆಗೆ ಅವರು ಆಗ್ರಹಿಸಿದ್ದಾರೆ. ಈ ಸಂಬಂಧ ಮಾಜಿ ಶಾಸಕರೂ ಆಗಿರುವ ರಮೇಶ್ ಬಾಬು ಸಿಎಂ ಸಿದ್ದರಾಮಯ್ಯ ಅವರಿಗೆ ನೀಡಿರುವ ದೂರು ಕುತೂಹಲ ಕೆರಳಿಸಿದೆ. ಕರ್ನಾಟಕದಲ್ಲಿ ಸರ್ಕಾರಿ ಆದೇಶ ಸಂಖ್ಯೆ – ಮಮಇ- 99 ಮಮಆ 2006ರ ಅನ್ವಯ ಭಾಗ್ಯಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ವತಿಯಿಂದ 2011ನೇ ಸಾಲಿನಲ್ಲಿ ಭಾಗ್ಯಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಅಂದಿನ ಬಿಜೆಪಿ ಸರ್ಕಾರ ಸೀರೆ ವಿತರಿಸುವ ಕಾರ್ಯಕ್ರಮವನ್ನು ಜಾರಿಗೊಳಿಸಿ, ಸುಮಾರು 10,68,996 ಸೀರೆಗಳನ್ನು ಸರ್ಕಾರದಿಂದ ಕೊಳ್ಳಲಾಗಿರುತ್ತದೆ. ಕರ್ನಾಟಕದ ನೇಕಾರರನ್ನು ಹಾಗೂ ಸೀರೆ ಉತ್ಪಾದನೆಯ ಸಹಕಾರ ಸಂಘಗಳನ್ನು ನಿರ್ಲಕ್ಷ್ಯ ಮಾಡಿ…

ಸಿಎಂ ವಿರುದ್ದ ಪ್ರಾಸಿಕ್ಯೂಷನ್ ಅನುಮತಿ; ರಾಜ್ಯಪಾಲರ ನಡೆಗೆ ಕಾಂಗ್ರೆಸ್ ಆಕ್ಷೇಪ; ಕಾನೂನು ಸಂಘರ್ಷದ ರಣಕಹಳೆ

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಆರೋಪ ಕುರಿತಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ ಅನುಮತಿ ನೀಡಿದ್ದಾರೆಂಬ ಬೆಳವಣಿಗೆ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ. ರಾಜ್ಯಪಾಲರ ನಿರ್ಧಾರಕ್ಕೆ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ರಾಜಕೀಯ ವಿಶ್ಲೇಷಕರೂ, ಕಾನೂನು ತಜ್ಞರೂ ಆಗಿರುವ ಮಾಜಿ ಶಾಸಕ ರಮೇಶ್ ಬಾಬು, ಪ್ರಾಸಿಕ್ಯೂಷನ್ ಅನುಮತಿ ನೀಡುವ ಸಂದರ್ಭದಲ್ಲಿ ರಾಜ್ಯಪಾಲರು ‘ಹೈಕೋರ್ಟ್‌ ಹಿಂದೆ ನೀಡಿದ್ದ ಆದೇಶ’ವನ್ನು ಪರಿಗಣಿಸಿಲ್ಲ ಎಂಬ ಬಗ್ಗೆ ಬೊಟ್ಟುಮಾಡಿದ್ದಾರೆ. ಕೆಪಿಸಿಸಿ ಮಾಧ್ಯಮ-ಸಂವಹನ ವಿಭಾಗದ ಅಧ್ಯಕ್ಷರೂ ಆಗಿರುವ ರಮೇಶ್ ಬಾಬು, ರಾಜ್ಯಪಾಲರ ಆತುರದ ನಡೆಯು ರಾಜಕೀಯ ಪ್ರೇರಿತವಾಗಿದ್ದು, ಇದು ಅನಗತ್ಯ ಕಾನೂನು ಸಂಘರ್ಷಕ್ಕೆ ಎಡೆಮಾಡಿಕೊಟ್ಟಿದೆ ಎಂದು ವಿಶ್ಲೇಷಿಸಿದ್ದಾರೆ. ಈ ಹಿಂದೆ ಮಾಜಿ ಸಿಎಂ ಯಡಿಯೂರಪ್ಪ ವಿರುದ್ದದ ಪ್ರಕರಣದಲ್ಲಿ ಹೈಕೋರ್ಟ್ ನೀಡಿರುವ ಆದೇಶ, ಸಲಹೆಗಳನ್ನು ರಾಜ್ಯಪಾಲರು ಗೌರವಿಸಿಲ್ಲ. ಇದು ಪಕ್ಷಪಾತೀಯ ನಡೆಯಾಗಿದ್ದು, ಇದರಿಂದ ಅನಗತ್ಯ ಕಾನೂನು ಸಂಘರ್ಷ…

ದೇವೇಗೌಡರ ಕಟುಂಬದ ವಿರುದ್ದ ಮಾಡಿದ್ದ ಆರೋಪವನ್ನು ಹಿಂಪಡೆಯುತ್ತೀರ? BSYಗೆ ರಮೇಶ್ ಬಾಬು ಮಾರ್ಮಿಕ ಪ್ರಶ್ನೆ..!

ಬೆಂಗಳೂರು: ಮುಡಾ ಸೈಟ್ ಹಗರಣ ಇದೀಗ ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ನಡುವೆ ಸಂಘರ್ಷವನ್ನು ಹುಟ್ಟುಹಾಕಿದೆ. ಸಿಎಂ ಸಿದ್ದರಾಮಯ್ಯ ವಿರುದ್ದ ಆರೋಪ ಕೇಳಿದ ತಕ್ಷಣ ಅವರ ರಾಜೀನಾಮೆಗೆ ಒತ್ತಾಯಿಸುತ್ತಿರುವ ಬಿಜೆಪಿ ನಾಯಕರ ನಿಲುವಿನ ಬಗ್ಗೆ ಪ್ರದೇಶ ಕಾಂಗ್ರೆಸ್ ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಕಿಡಿ ಕಾರಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಆರೋಪ ಕೇಳಿಬಂದ ತಕ್ಷಣ ಅವರ ರಾಜೀನಾಮೆಗೆ ಆಗ್ರಹಿಸುತ್ತಿರುವ ಮಾಜಿ ಸಿಎಂ ಯಡಿಯೂರಪ್ಪ ಅವರು ತಾವೇ ಈ ಹಿಂದೆ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬದ ವಿರುದ್ದ ಮಾಡಿರುವ ಆರೋಪಗಳನ್ನು‌ ಹಿಂಪಡೆಯುತ್ತಾರ ಹಾಗೂ ಅಶೋಕ್ ಅವರ ಭೂ ಅಕ್ರಮ ಬಗ್ಗೆ ತನಿಖೆಗೆ ಒತ್ತಾಯಿಸುತ್ತಾರ? ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಮಾಜಿ ಶಾಸಕರೂ ಆಗಿರುವ ರಮೇಶ್ ಬಾಬು ಅವರು ಈ ಸಂಬಂಧ ಬಿಡುಗಡೆ ಮಾಡಿರುವ ಮಾಧ್ಯಮ ಹೇಳಿಕೆ ಗಮನಸೆಳೆದಿದೆ. ಕರ್ನಾಟಕದಲ್ಲಿ ಜನನಾಯಕರಾಗಿ ಬೆಳೆದವರಲ್ಲಿ ಮಾಜಿ ಮುಖ್ಯ ಮಂತ್ರಿ…

ಬರಗಾಲ ಇದ್ದರೂ ಸಂಸದರ ಕ್ಷೇತ್ರಾಭಿವೃದ್ಧಿ ಹಣ ಬಿಡುಗಡೆ ಮಾಡದ ಕೇಂದ್ರ ಸರ್ಕಾರ; ಕಾಂಗ್ರೆಸ್ ಆಕ್ರೋಶ

ಬೆಂಗಳೂರು: ಕರ್ನಾಟಕದಲ್ಲಿ ಬರಗಾಲದ ಪರಿಸ್ಥಿತಿಯ ಅರಿವಿದ್ದರೂ ಕೇಂದ್ರ ಸರ್ಕಾರ ಲೋಕಸಭಾ ಸದಸ್ಯರಿಗೆ ನೀಡಬೇಕಾದ ಲೋಕಸಭಾ ಸ್ಥಳೀಯ ಕ್ಷೇತ್ರಾಭಿವೃದ್ಧಿ ಯೋಜನೆಯ ವಾರ್ಷಿಕ 5 ಕೋಟಿ ಹಣವನ್ನು ಪ್ರಸಕ್ತ ಸಾಲಿನಲ್ಲಿ ಕರ್ನಾಟಕದ ಲೋಕಸಭಾ ಸದಸ್ಯರಿಗೆ ಮತ್ತು ರಾಜ್ಯಸಭಾ ಸದಸ್ಯರಿಗೆ ಬಿಡುಗಡೆ ಮಾಡದೇ ದಿವಾಳಿತನವನ್ನು ಪ್ರದರ್ಶಿಸಿದೆ ಎಂದು ಪ್ರದೇಶ ಕಾಂಗ್ರೆಸ್ ಆರೋಪಿಸಿದೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡಿರುವ ಕೆಪಿಸಿಸಿ ವಕ್ತಾರ ರಮೇಶ್ ಬಾಬು, ಕೇಂದ್ರದ ಬಿಜೆಪಿ ಸರ್ಕಾರವು ರಾಜ್ಯದ ಲೋಕಸಭಾ ಸದಸ್ಯರಿಗೆ ನೀಡಬೇಕಾದ ಲೋಕಸಭಾ ಸ್ಥಳೀಯ ಕ್ಷೇತ್ರಾಭಿವೃದ್ಧಿ ಯೋಜನೆಯ ವಾರ್ಷಿಕ 5 ಕೋಟಿ ಹಣವನ್ನು ಪ್ರಸಕ್ತ ಸಾಲಿನಲ್ಲಿ ಕರ್ನಾಟಕದ ಲೋಕಸಭಾ ಸದಸ್ಯರಿಗೆ ಮತ್ತು ರಾಜ್ಯಸಭಾ ಸದಸ್ಯರಿಗೆ ಬಿಡುಗಡೆ ಮಾಡಿಲ್ಲ. ಪ್ರಸಕ್ತ ಸಾಲಿನಲ್ಲಿ ಒಟ್ಟು ಕರ್ನಾಟಕದ ಸದಸ್ಯರಿಗೆ 205 ಕೋಟಿ ಹಣವನ್ನು ಬಿಡುಗಡೆ ಮಾಡಬೇಕಾಗಿದ್ದು, ಕರ್ನಾಟಕದ ಬರಗಾಲದ ಪರಿಸ್ಥಿತಿಯ ಅರಿವಿದ್ದರೂ, ಹಣ ಬಿಡುಗಡೆ ಮಾಡದೇ ಕೇಂದ್ರದ ಮೋದಿ ಸರ್ಕಾರ ದಿವಾಳಿತನವನ್ನು ತೋರಿರುತ್ತದೆ. ಕರ್ನಾಟಕದ…