ಗೌಡ ಸಾರಸ್ವತ ಸಂಪ್ರದಾಯಯುಕ್ತ ವಿಶ್ವವಸು ಕ್ಯಾಲೆಂಡರ್ ಅನಾವರಣ

ಮಂಗಳೂರಿನ ಡೊಂಗೇರಕೇರಿಯ ವೇದಮೂರ್ತಿ ದಿನೇಶ್ ಭಟ್ ರವರ ನಿವಾಸದಲ್ಲಿ ಶ್ರೀ ಲಕ್ಷ್ಮೀನಾರಾಯಣ ದೇವರ ಸಮ್ಮುಖದಲ್ಲಿ ಹಿಂದೂ ಪಂಚಾಂಗ ಆಧಾರಿತ ವಿಶ್ವವಸು ಕ್ಯಾಲೆಂಡರನ್ನು ಮಾರ್ಚ್ 9, 2025 ರಂದು ಬಿಡುಗಡೆ ಮಾಡಲಾಯಿತು. ಪೈ ಸೇಲ್ಸ್ ಸಮೂಹ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಟಿ. ಗಣಪತಿ ಪೈ, ಡಿವಿಕೆ ಗ್ರೂಪ್ ಸಂಸ್ಥೆಯ ವ್ಯವಸ್ಥಾಪಕ ಪಾಲುದಾರರಾದ ಡಿ. ವಾಸುದೇವ್ ಕಾಮತ್ ಮತ್ತು ಇನ್ನಿತರ ಹಲವಾರು ಗಣ್ಯ ಅತಿಥಿಗಳು ಸಮಾರಂಭದಲ್ಲಿ ಪಾಲ್ಗೊಂಡು ಶುಭಾಶಯಗಳನ್ನು ಹಾರೈಸಿದರು. ವೇದಮೂರ್ತಿ ಎಂ. ದಿನೇಶ್ ಭಟ್ ಅತಿಥಿಗಳನ್ನು ಸ್ವಾಗತಿಸಿದರು. ಕ್ಯಾಲೆಂಡರ್‌ನ್ನು ರಚಿಸಿದ ಹಾಗೂ ಸಂಪಾದಕರಾದ ಎಂ.ನರಸಿಂಹ ಭಟ್ ಅವರು ಚಂದ್ರಮಾನ ಯುಗಾದಿಯಿಂದ ಪ್ರಾರಂಭವಾಗುವ ಈ ಕ್ಯಾಲೆಂಡರನ್ನು ಅನುಸರಿಸುವ ಮಹತ್ವವನ್ನು ವಿವರಿಸಿದರು. ಈ ಕ್ಯಾಲೆಂಡರ್ ಪಂಚಾಗ ಮಾಸಗಳ ಪ್ರಕಾರ ತಿಂಗಳುಗಳನ್ನು ಒಳಗೊಂಡಿದ್ದು, ಉದಾಹರಣೆಗೆ ಚೈತ್ರಾ, ವೈಶಾಕಾದಿಂದ ಫಲ್ಗುನಾ ವರೆಗೆ, ತಿಥಿ, ನಕ್ಷತ್ರ ಮತ್ತು ಹಲವಾರು ಪ್ರಮುಖ ದಿನಗಳನ್ನು ಎತ್ತಿ ತೋರಿಸುದಲ್ಲದೆ, ಏಕಾದಶಿ…