ಕತಾರ್: ಸಾಗರೋತ್ತರ ರಾಷ್ಟ್ರ ಕತಾರ್’ನ ಬಿಲ್ಲವ ಸಮುದಾಯದ ಪಾಳಯದಲ್ಲಿ ಅಚ್ಚರಿಯ ಬೆಳವಣಿಗೆ ನಡೆದಿದೆ. ಬಿಲ್ಲವಾಸ್ ಕತಾರ್’ನ ಈವರೆಗೂ ಅಧ್ಯಕ್ಷರಾಗಿದ್ದ ಸಂದೀಪ್ ಸಾಲಿಯಾನ್’ಗೆ ಗೌರವಪೂರ್ವಕವಾಗಿ ಬೀಳ್ಕೊಡುಗೆ ನೀಡಲಾಗಿದೆ. ಇದೇ ವೇಳೆ, ನೂತನ ಅಧ್ಯಕ್ಷರಾಗಿ ಅಪರ್ಣ ಶರತ್ ನೇಮಕವಾಗಿದ್ದಾರೆ. ಬಿಲ್ಲವಾಸ್ ಕತಾರ್ ನ ನೇತೃತ್ವದಲ್ಲಿ ಕತಾರ್’ನ ಎಂ.ಆರ್.ಎ, ಸಲ್ವ ರೋಡ್, ಔತಣಕೂಟ ಹಾಲ್’ನಲ್ಲಿ ನಡೆದ ಸಮಾರಂಭದಲ್ಲಿ ಬಿಲ್ಲವಾಸ್ ಕತಾರ್ ನ ಅಧ್ಯಕ್ಷರಾದ ಸಂದೀಪ್ ಸಾಲಿಯಾನ್ ಅವರನ್ನು ಅಭಿನಂಧಿಸಿದ ಅಪೂರ್ವ ಸನ್ನಿವೇಶ ಗಮನಸೆಳೆಯಿತು. ಸಮುದಾಯದ ಮುಖಂಡರ ಹಾಗೂ ವಿವಿಧ ಸಂಘಟನೆಗಳ ಪ್ರಮುಖರ ಉಪಸ್ಥಿತಿಯಲ್ಲಿ ನೆರವೇರಿದ ಸಮಾರಂಭದಲ್ಲಿ ಸಂದೀಪ್ ಸಾಲಿಯಾನ್ ವಿನಯಪೂರ್ವಕವಾಗಿ ಬೀಳ್ಕೊಡಲಾಯಿತು. ಉದ್ಯೋಗ ನಿಮಿತ್ತ ನೆರೆಯ ಕೊಲ್ಲಿ ರಾಷ್ಟ್ರಕ್ಕೆ ವರ್ಗಾವಣೆಗೊಂಡ ಅನಿವಾರ್ಯತೆ ಹಿನ್ನೆಲೆಯಲ್ಲಿ ಬಿಲ್ಲವಾಸ್ ಕತಾರ್’ನ ಜವಾಬ್ಧಾರಿಯಿಂದ ಬಿಡುಗೊಂಡಿರುವುದಾಗಿ ಹೇಳಿದ ಸಂದೀಪ್ ಸಾಲಿಯಾನ್, ಈ ವರೆಗೂ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಸಂದೀಪ್ ಸಾಲಿಯಾನ್ ನಿರ್ಗಮದ ಹಿನ್ನೆಲೆಯಲ್ಲಿ ತೆರವಾಗಿರುವ ಬಿಲ್ಲವಾಸ್ ಕತಾರ್’ನ…