KSRTCಗೆ ‘ಅತ್ಯುತ್ತಮ ಉದ್ಯೋಗದಾತ ಹಾಗೂ ಅತ್ಯುತ್ತಮ ಸುರಕ್ಷಾ ಉಪಕ್ರಮ ಅನುಷ್ಠಾನ’ ಪ್ರಶಸ್ತಿ

ಮುಂಬೈ: ಕರ್ನಾಟಕ ಸರ್ಕಾರದ ಸ್ವಾಮ್ಯಕ್ಕೊಳಪಟ್ಟಿರುವ ರಾಜ್ಯ ಸಾರಿಗೆ ಸಂಸ್ಥೆ (KSRTCಸಿ) ಗೆ ಸಾಲು ಪ್ರಶಸ್ತಿಗಳು ಸಿಗುತ್ತಿವೆ. ಇದೀಗ ಕಾಮಕಾಜಿ ಬಿ2ಬಿ ಮೀಡಿಯಾ ವತಿಯಿಂದ ನೀಡಲಾಗುತ್ತಿರುವ ಪ್ರತಿಷ್ಠಿತ ಪ್ರಶಸ್ತಿಯೂ ಲಭಿಸಿದೆ. ಕಾಮಕಾಜಿ ಬಿ 2 ಬಿ ಮೀಡಿಯಾ ನೀಡುವ 15 ನೇ ಆವೃತ್ತಿಯ ಎಕ್ಸಪ್ರೆಸ್ ಲಾಜಿಸ್ಟಿಕ್ ಹಾಗೂ ಸಪ್ಲೈ ಚೈನ್ ಲೀಡರ್ ಶಿಪ್ ಪ್ರಶಸ್ತಿಯಡಿ ‘ಅತ್ಯುತ್ತಮ ಉದ್ಯೋಗದಾತ ಹಾಗೂ ಅತ್ಯುತ್ತಮ ಸುರಕ್ಷಾ ಉಪಕ್ರಮ ಅನುಷ್ಠಾನ’ ವರ್ಗಗಳಲ್ಲಿ ಕೆಎಸ್ಸಾರ್ಟಿಸಿಗೆ ಎರಡು ಪ್ರಶಸ್ತಿಗಳು ಸಿಕ್ಕಿದೆ. ಮುಂಬಯಿಯ ತಾಜ್ ಲ್ಯಾಂಡ್ಸ್ ಎಂಡ್ ಹೋಟೆಲ್ ನಲ್ಲಿ ಗುರುವಾರ ನಡೆದ ಪ್ರಶಸ್ತಿ ಸಮಾರಂಭದಲ್ಲಿ ಬ್ಲೂ ಯಾಂಡರ್ ವ್ಯವಸ್ಥಾಪಕ ನಿರ್ದೇಶಕರು ವಿನೋಕ್‌, ಬ್ಲೂ ಯಾಂಡರ್ ಉಪಾಧ್ಯಕ್ಷ ಉಮೇಶ್ ಗೌರ್, ಬ್ಲೂ ಯಾಂಡರ್ ನಿರ್ದೇಶಕ ಅನುರಾಧ ಅವರು 15ನೇ ಆವೃತ್ತಿಯ ಎಕ್ಸ್ಪ್ರೆಸ್ ಲಾಜಿಸ್ಟಿಕ್ ಹಾಗೂ ಸಪ್ಲೈ ಚೈನ್ ಲೀಡರ್ಶಿಪ್ ವರ್ಗದಡಿ ‘ಅತ್ಯುತ್ತಮ ಉದ್ಯೋಗದಾತ ಹಾಗೂ ಅತ್ಯುತ್ತಮ ಸುರಕ್ಷಾ ಉಪಕ್ರಮ…