ಬೆಂಗಳೂರು: ಉದ್ಯಾನನಗರಿ ಬೆಂಗಳೂರಿನ ಆನೇಕಲ್ ಬಳಿಯ ಅಲಯನ್ಸ್ ವಿಶ್ವವಿದ್ಯಾಲಯದಲ್ಲಿ ಕನ್ನಡ ಭಾಷಾ ಕೇಂದ್ರ, ಭಾಷೆ ಮತ್ತು ಸಾಹಿತ್ಯ ವಿಭಾಗ, ಕನ್ನಡ ಸಂಘ ಹಾಗೂ ವಿದ್ಯಾರ್ಥಿ ಬೆಂಬಲ ಸೇವಾ ವಿಭಾಗಗಳ ಸಂಯುಕ್ತಾಶ್ರಯದಲ್ಲಿ 70ನೇ ಕನ್ನಡ ರಾಜ್ಯೋತ್ಸವವನ್ನು ವೈಭವದಿಂದ ಆಚರಿಸಲಾಯಿತು. ರಾಜ್ಯೋತ್ಸವ ಸಂಭ್ರಮದ ಅಂಗವಾಗಿ ಅಕ್ಟೋಬರ್ 27ರಿಂದ ನವೆಂಬರ್ 1ರವರೆಗೆ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿವರ್ಗದವರಿಗಾಗಿ ಸಾಂಸ್ಕೃತಿಕ ವೇಷಭೂಷಣ, ಆಶುಭಾಷಣ, ಭಾಷಣ, ಪ್ರಬಂಧ, ಕವನ ರಚನೆ, ನೃತ್ಯ, ಗಾಯನ, ರಂಗೋಲಿ, ರಸಪ್ರಶ್ನೆ ಹಾಗೂ ಕನ್ನಡೇತರರಿಗಾಗಿ ಕನ್ನಡ ಸಂಭಾಷಣಾ ಸ್ಪರ್ಧೆ ಸೇರಿದಂತೆ ಹಲವು ಸ್ಪರ್ಧೆಗಳು ಹಮ್ಮಿಕೊಳ್ಳಲಾಯಿತು. ನವೆಂಬರ್ 3ರಂದು ಬೆಳಿಗ್ಗೆ 9 ಗಂಟೆಗೆ ವಿಶ್ವವಿದ್ಯಾಲಯದ ಆಲ್ ಫ್ರೆಸ್ಕೋ ಸಭಾಂಗಣದಲ್ಲಿ ವಿಶೇಷ ಸಮಾರಂಭ ಗಮನಸೆಳೆಯಿತು. ವಿಶ್ವವಿದ್ಯಾಲಯದ ಸಂಸ್ಥಾಪಕ ಸದಸ್ಯೆ ಶೈಲಾ ಜಿ. ಚೆಬ್ಬಿ ಅವರು ಕನ್ನಡಾಂಬೆಗೆ ಪುಷ್ಪನಮನ ಸಲ್ಲಿಸಿ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಕನ್ನಡ ನಾಡಗೀತೆ ಗಾಯನದೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ದೊರೆಯಿತು. ಅಲ್ಲದೇ…
