ಸಾರ್ವಜನಿಕ ಹಿತಕ್ಕೆ ಧಕ್ಕೆ ತರುವ ಪ್ರಕರಣಗಳನ್ನು ಹಿಂದಕ್ಕೆ ಪಡೆದಿರುವುದು ಹಿಂದಿನ ಬಿಜೆಪಿ ಸರ್ಕಾರ; ರಮೇಶ್ ಬಾಬು

ಬೆಂಗಳೂರು: ಸಾರ್ವಜನಿಕ ಹಿತಕ್ಕೆ ಧಕ್ಕೆ ತರುವ ಪ್ರಕರಣಗಳನ್ನು ಹಿಂದಕ್ಕೆ ಪಡೆದಿರುವುದು ಹಿಂದಿನ ಬಿಜೆಪಿ ಸರ್ಕಾರವೇ ಹೊರತು ಈಗಿನ ಸಿದ್ದರಾಮಯ್ಯ ಸರ್ಕಾರವಲ್ಲ ಎಂದು ಕೆಪಿಸಿಸಿಮಾಜಿ ಶಾಸಕ, ಕಾಂಗ್ರೆಸ್ ನಾಯಕ ರಮೇಶ್ ಬಾಬು ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡತ್ತಾ, ಬಿಜೆಪಿ ನಾಯಕರ ಟೀಕೆಗಳಿಗೆ ತಮ್ಮದೇ ಶೈಲಿಯಲ್ಲಿ ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು, ಕಾಂಗ್ರೆಸ್ ಸರ್ಕಾರ ಹಿಂಪಡೆದ ಪ್ರಕರಣಗಳಲ್ಲಿ ಆರನೇ ಪ್ರಕರಣವಾದ ಹಳೇ ಹುಬ್ಬಳಿ ಗಲಭೆ ಪ್ರಕರಣ ಹಿಂಪಡೆಯಬೇಕು ಎಂದು ದಲಿತ ಸಂಘಟನೆಗಳ ಒಕ್ಕೂಟದ ಡಿ.ಬಿ.ಛಲವಾದಿ ಅವರು ರಾಜ್ಯ ಸರ್ಕಾರಕ್ಕೆ ಮನವಿ ಕೊಟ್ಟ ಆಧಾರದ ಮೇಲೆ ಅದನ್ನು ಗೃಹ ಇಲಾಖೆಗೆ ಕಳುಹಿಸಲಾಗಿತ್ತು. ಅವರು ಉಪ ಸಮಿತಿಗೆ ಕಳುಹಿಸಿದ್ದರು, ಈ ಸಮಿತಿಯ ವರದಿ ಅಧಾರದ ಮೇಲೆ ಕೇಸ್ ನಂಬರ್ 63/ 2022 ಹಳೇ ಹುಬ್ಬಳ್ಳಿ ಪ್ರಕರಣ ಹಿಂಪಡೆಯಲಾಗಿದೆ ಎಂದರು. ಸಿಆರ್‌ಪಿಸಿ ಕಲಂ 321 ರಲ್ಲಿ…

ಬೆಂಗಳೂರಿನಲ್ಲಿ DL ಹೊಂದಿರದ ಚಾಲಕರ ಅವಾಂತರ..!  ಅವಘಡಗಳಿಗೆ ಬ್ರೇಕ್ ಹಾಕಿ ಎಂದು ಸಿಎಂಗೆ ರಮೇಶ್ ಬಾಬು ಪತ್ರ

ಬೆಂಗಳೂರು: ಬಿಬಿಎಂಪಿಯ ವ್ಯಾಪ್ತಿಯಲ್ಲಿ ಚಾಲನಾ ಪರವಾನಿಗಿ (DL ) ಇಲ್ಲದೆ ಲಾರಿ ಚಾಲಕರು ಅಪಘಾತಗಳನ್ನು ಎಸಗುತ್ತಿರುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕೆಪಿಸಿಸಿ ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಮುಖ್ಯಮಂತ್ರಿಯನ್ನು ಒತ್ತಾಯಿಸಿದ್ದಾರೆ. ಈ ಸಂಬಂಧ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಬರೆದಿರುವ ಪತ್ರ ಗಮನಸೆಳೆದಿದೆ. 07-08-2024 ರಂದು ಬೆಂಗಳೂರಿನ ಡಾಬಸ್ ಪೇಟೆಯ ಬಳಿ ನಡೆದ ರಸ್ತೆ ಅಪಘಾತದಲ್ಲಿ ಗರ್ಭಿಣಿ ಮಹಿಳೆ ಮತ್ತು ಗರ್ಭದೊಳಗೆ ಇದ್ದ ಮಗು ಮೃತ ಪಟ್ಟಿದ್ದು, ಟಿಪ್ಪರ್ ಲಾರಿಯ ಚಾಲಕ ಪರಾರಿಯಾಗಿರುತ್ತಾನೆ. ಒಂದು ವಾರದ ಹಿಂದೆ ಬೆಂಗಳೂರಿನ ಕೆ.ಆರ್ ಸರ್ಕಲ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಇಬ್ಬರು ಇಂಜಿನಿಯರ್‌ಗಳು ಮೃತ ಪಟ್ಟಿದ್ದು, ಬಿಬಿಎಂಪಿ ಕಸದ ಲಾರಿ ಚಾಲಕ ಪರಾರಿಯಾಗಿರುತ್ತಾನೆ. ಇತ್ತೀಚಿಗೆ ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ರಸ್ತೆ ಅಪಘಾತಗಳಲ್ಲಿ ಬಹುತೇಕ ಲಾರಿ ಚಾಲಕರ ಚಾಲನಾ ಪರವಾನಿಗಿ ಇರುವುದಿಲ್ಲ ಎಂದು ರಮೇಶ್ ಬಾಬು…

ಬರಗಾಲ ಇದ್ದರೂ ಸಂಸದರ ಕ್ಷೇತ್ರಾಭಿವೃದ್ಧಿ ಹಣ ಬಿಡುಗಡೆ ಮಾಡದ ಕೇಂದ್ರ ಸರ್ಕಾರ; ಕಾಂಗ್ರೆಸ್ ಆಕ್ರೋಶ

ಬೆಂಗಳೂರು: ಕರ್ನಾಟಕದಲ್ಲಿ ಬರಗಾಲದ ಪರಿಸ್ಥಿತಿಯ ಅರಿವಿದ್ದರೂ ಕೇಂದ್ರ ಸರ್ಕಾರ ಲೋಕಸಭಾ ಸದಸ್ಯರಿಗೆ ನೀಡಬೇಕಾದ ಲೋಕಸಭಾ ಸ್ಥಳೀಯ ಕ್ಷೇತ್ರಾಭಿವೃದ್ಧಿ ಯೋಜನೆಯ ವಾರ್ಷಿಕ 5 ಕೋಟಿ ಹಣವನ್ನು ಪ್ರಸಕ್ತ ಸಾಲಿನಲ್ಲಿ ಕರ್ನಾಟಕದ ಲೋಕಸಭಾ ಸದಸ್ಯರಿಗೆ ಮತ್ತು ರಾಜ್ಯಸಭಾ ಸದಸ್ಯರಿಗೆ ಬಿಡುಗಡೆ ಮಾಡದೇ ದಿವಾಳಿತನವನ್ನು ಪ್ರದರ್ಶಿಸಿದೆ ಎಂದು ಪ್ರದೇಶ ಕಾಂಗ್ರೆಸ್ ಆರೋಪಿಸಿದೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡಿರುವ ಕೆಪಿಸಿಸಿ ವಕ್ತಾರ ರಮೇಶ್ ಬಾಬು, ಕೇಂದ್ರದ ಬಿಜೆಪಿ ಸರ್ಕಾರವು ರಾಜ್ಯದ ಲೋಕಸಭಾ ಸದಸ್ಯರಿಗೆ ನೀಡಬೇಕಾದ ಲೋಕಸಭಾ ಸ್ಥಳೀಯ ಕ್ಷೇತ್ರಾಭಿವೃದ್ಧಿ ಯೋಜನೆಯ ವಾರ್ಷಿಕ 5 ಕೋಟಿ ಹಣವನ್ನು ಪ್ರಸಕ್ತ ಸಾಲಿನಲ್ಲಿ ಕರ್ನಾಟಕದ ಲೋಕಸಭಾ ಸದಸ್ಯರಿಗೆ ಮತ್ತು ರಾಜ್ಯಸಭಾ ಸದಸ್ಯರಿಗೆ ಬಿಡುಗಡೆ ಮಾಡಿಲ್ಲ. ಪ್ರಸಕ್ತ ಸಾಲಿನಲ್ಲಿ ಒಟ್ಟು ಕರ್ನಾಟಕದ ಸದಸ್ಯರಿಗೆ 205 ಕೋಟಿ ಹಣವನ್ನು ಬಿಡುಗಡೆ ಮಾಡಬೇಕಾಗಿದ್ದು, ಕರ್ನಾಟಕದ ಬರಗಾಲದ ಪರಿಸ್ಥಿತಿಯ ಅರಿವಿದ್ದರೂ, ಹಣ ಬಿಡುಗಡೆ ಮಾಡದೇ ಕೇಂದ್ರದ ಮೋದಿ ಸರ್ಕಾರ ದಿವಾಳಿತನವನ್ನು ತೋರಿರುತ್ತದೆ. ಕರ್ನಾಟಕದ…

ಹಿಂದುಳಿದ ವರ್ಗಗಳ ಆಯೋಗದ ಅವಧಿ ವಿಸ್ತರಣೆ ಬೇಡ; ಸಿದ್ದರಾಮಯ್ಯ ಸರ್ಕಾರಕ್ಕೆ ಕೆಪಿಸಿಸಿ ಸಲಹೆ

ಬೆಂಗಳೂರು: ಜಾತಿ ಸಮೀಕ್ಷೆ ವಿಚಾರದಲ್ಲಿ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗಳು ನಡೆಯುತ್ತಿದ್ದು ಆಡಳಿತಾರೂಢ ಕಾಂಗ್ರೆಸ್ ಪಕ್ಷದಲ್ಲೇ ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿದೆ. ಇದೇ ವೇಳೆ, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರ ಅವಧಿ ವಿಸ್ತರಣೆಗೆ ಸಿಎಂ ಸಿದ್ದರಾಮಯ್ಯ ಮುಂದಾಗಿದ್ದಾರೆ. ಆದರೆ, ಸಿಎಂ ತೀರ್ಮಾನಕ್ಕೆ ಕಾಂಗ್ರೆಸ್ ಚಾಣಾಕ್ಷರು ವಿರೋಧ ವ್ಯಕ್ತಪಡಿಸುವ ಮೂಲಕ ರಾಜ್ಯ ರಾಜಕೀಯದಲ್ಲಿ ಕೋಲಾಹಲಕ್ಕೆ ಕಾರಣರಾಗಿದ್ದಾರೆ. ಸಿಎಂ ಅವರುವೀ ವಿಚಾರದಲ್ಲಿ ಆತುರದ ನಿರ್ಧಾರ ಬೇಡ ಎಂದು ಕಾಂಗ್ರೆಸ್ ಹಿರಿಯ ನಾಯಕರೇ ಸಲಹೆ ಮುಂದಿಟ್ಟಿದ್ದಾರೆ. ಅದರಲ್ಲೂ ಮಾಜಿ ಶಾಸಕರೂ ಆದ ಕೆಪಿಸಿಸಿ ವಕ್ತಾರ ರಮೇಶ್ ಬಾಬು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದಿರುವ ಪತ್ರ ಕುತೂಹಲದ ಕೇಂದ್ರಬಿಂದುವಾಗಿದೆ. ಸದ್ಯದ ಪರಿಸ್ಥಿತಿಯಲ್ಲಿ ಹಿಂದುಳಿದ ವರ್ಗಗಳ ಆಯೋಗದ ಅವಧಿ ವಿಸ್ತರಣೆ ಬೇಡ ಎಂದು ರಾಜಕೀಯ ವಿಶ್ಲೇಷಕರೂ ಆದ ರಮೇಶ್ ಬಾಬು ಸಿಎಂ ಅವರಿಗೆ ಪತ್ರ ಬರೆದಿದ್ದಾರೆ. ರಮೇಶ್ ಬಾಬು ಅವರ ಪತ್ರದಲ್ಲೇನಿದೆ..? ಕರ್ನಾಟಕ ರಾಜ್ಯ…