ಮೇಲ್ಮನೆ ಅಖಾಡ: ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ ನೈಜ ಶಿಕ್ಷಕ ಮತದಾರರನ್ನು ಪರಿಷ್ಕೃತ ಕರಡುಪಟ್ಟಿಗೆ ಸೇರ್ಪಡೆಗೊಳಿಸಲು ಆಗ್ರಹ

ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ಅಖಾಡ ಸಜ್ಜಾಗಿದ್ದು ಬೆಂಗಳೂರು ಶಿಕ್ಷಕರ ಕ್ಷೇತ್ರದ ಕರಡು ಮತದಾರರ ಪಟ್ಟಿಯಲ್ಲಿ ಕೈಬಿಟ್ಟುಹೋಗಿರುವ ನೈಜ ಶಿಕ್ಷಕರ ಮತದಾರರ ಹೆಸರುಗಳನ್ನು ಪರಿಷ್ಕೃತ ಕರಡುಪಟ್ಟಿಯಲ್ಲಿ ಸೇರ್ಪಡೆಗೊಳಿಸಬೇಕೆಂದು ಬೆಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷರೂ ಆದ ಜೆಡಿಎಸ್ ಕಾನೂನು ಘಟಕದ ಅಧ್ಯಕ್ಷ ಎ.ಪಿ.ರಂಗನಾಥ ಒತ್ತಾಯಿಸಿದ್ದಾರೆ. ಬೆಂಗಳೂರು ಶಿಕ್ಷಕರ ಕ್ಷೇತ್ರದ ಮತದಾರ ನೋಂದಣಾಧಿಕಾರಿಗಳೂ ಆದ ಪ್ರಾದೇಶಿಕ ಆಯುಕ್ತರಿಗೆ ಈ ಸಂಬಂಧ ಮನವಿ ಸಲ್ಲಿಸಿರುವ ಎ.ಪಿ.ರಂಗನಾಥ್, ಈಗಾಗಲೇ ಬಿಡುಗಡೆ ಮಾಡಿರುವ ಬೆಂಗಳೂರು ಶಿಕ್ಷಕರ ಕ್ಷೇತ್ರದ ಮತದಾರರ ಕರಡು ಪಟ್ಟಿಯಲ್ಲಿ ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯ ಪ್ರೌಢಶಾಲೆಯ 9 BEO (8000) ಮತ್ತು ಬೆಂಗಳೂರು ದಕ್ಷಿಣ ಮತ್ತು ಉತ್ತರದ ಪಿಯು ಉಪನಿರ್ದೇಶಕರು (4000) ಪರಿಶೀಲಿಸಿ ಕಳುಹಿಸಿದ್ದ ಅರ್ಜಿಗಳ ಜೊತೆಗೆ ಉನ್ನತ ಶಿಕ್ಷಣ ಇಲಾಖೆಯ ವಿವಿಧ ಪ್ರಾಂಶುಪಾಲರುಗಳು ಸಲ್ಲಿಸಲಾಗಿದ್ದ (3000) ಒಟ್ಟು 15000 ಅರ್ಜಿಗಳು (ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ) ಜಿಲ್ಲೆಯನ್ನು ಹೊರತುಪಡಿಸಿ ನವೆಂಬರ್…

ಪಿಯುಸಿ ಮೌಲ್ಯಮಾಪಕರಿಗೆ ಸಿಗದ ಸಂಭಾವನೆ, ಭತ್ಯೆ.. ಅ.3ರಂದು ಪ್ರತಿಭಟನೆ ನಡೆಸುವ ಎಚ್ಚರಿಕೆ

ಪಿಯುಸಿ ಮೌಲ್ಯಮಾಪಕರಿಗೆ ಸಿಗದ ಸಂಭಾವನೆ, ಭತ್ಯೆ.. ವಿಳಂಬ ನೀತಿ ವಿರುದ್ಧ ರಂಗನಾಥ್ ಆಕ್ರೋಶ.. ಅಕ್ಟೊಬರ್ ೩ ರಂದು ಪ್ರತಿಭಟನೆ ನಡೆಸುವ ಎಚ್ಚರಿಕೆ ಬೆಂಗಳೂರು: ಕಳೆದ ಮಾರ್ಚ್-ಏಪ್ರಿಲ್’ನಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷಾ ಮತ್ತು ಮೌಲ್ಯಮಾಪನ ಕಾರ್ಯ, ಜೂನ್’ನಲ್ಲಿ ನಡೆದ ಮೊದಲ ಪೂರಕ ಪರೀಕ್ಷೆ ಮತ್ತು ಮೌಲ್ಯಮಾಪನ ಕಾರ್ಯ ಹಾಗೂ ಆಗಸ್ಟ್-ಸೆಪ್ಟೆಂಬರ್’ನಲ್ಲಿ ನಡೆದ 2ನೇ ಪೂರಕ ಪರೀಕ್ಷೆ ಮತ್ತು ಮೌಲ್ಯಮಾಪನ ಕಾರ್ಯಗಳಲ್ಲಿ ಭಾಗಿಯಾದ ಉಪನ್ಯಾಸಕರ ಸಂಭಾವನೆ ಮತ್ತು ಭತ್ಯೆಗಳನ್ನು ಈವರೆಗೂ ಸಂಪೂರ್ಣವಾಗಿ ಬಿಡುಗಡೆ ಮಾಡದಿರುವ ಬಗ್ಗೆ ಬೆಂಗಳೂರು ಬಾರ್ ಕೌನ್ಸಿಲ್ ಮಾಜಿ ಅಧ್ಯಕ್ಷರೂ ಆದ ಹಿರಿಯ ವಕೀಲ ಎ.ಪಿ.ರಂಗನಾಥ್ ಅಸಮಾಧಾನ ಹೊರಹಾಕಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು‌ ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷರಿಗೆ ಪತ್ರ ಬರೆದಿರುವ ಎ.ಪಿ.ರಂಗನಾಥ್, ಜರೂರಾಗಿ ಮೌಲ್ಯಮಾಪನ ಮಾಡಿಸಿ, ಶೀಘ್ರದಲ್ಲಿ ಫಲಿತಾಂಶ ಬಿಡುಗಡೆ ಮಾಡಿದ್ದೇವೆಂದು ಹೆಮ್ಮೆ ಪಡುವ ಮಂಡಲಿಯು ಪರೀಕ್ಷೆ ಮತ್ತು ಮೌಲ್ಯಮಾಪನ ಕಾರ್ಯದಲ್ಲಿ…