ಬೆಂಗಳೂರು: ನಮ್ಮ ಮೆಟ್ರೋ ರೈಲು ಪ್ರಯಾಣ ದರ ಏರಿಕೆಯಾಗಿಡೇ. ಈ ಸಂಬಂಧ BMRCL ಅಧಿಕೃತ ಪ್ರಕಟಣೆ ಹೊರಡಿಸಿದೆ. 8 ವರ್ಷಗಳ ಬಳಿಕ ನಮ್ಮ ಮೆಟ್ರೋ ರೈಲು ಪ್ರಯಾಣ ದರ ಏರಿಕೆಯಾಗಿದೆ ಎನ್ನಲಾಗುತ್ತಿದ್ದು, ಪರಿಷ್ಕೃತ ದರ ಫೆ.9 ರಿಂದ ಜಾರಿಗೆ ಬರಲಿದೆ. ಪ್ರಯಾಣ ದರ ಶೇ.46 ರಷ್ಟು ಏರಿಕೆ ಮಾಡಲಾಗಿದ್ದು 10 ರೂಪಾಯಿಯಿಂದ 90 ರೂಪಾಯಿ ವರೆಗೆ ಇರಲಿದೆ ಎಂದು ಅಧಿಕಾರಿಗಳು ಹೇಳಿದ್ದರು.
Tag: Nava Karnataka Kannada
“ನಾವು ಯಾವುದೇ ಅವಕಾಶವನ್ನು ಬಿಟ್ಟುಕೊಡುವುದಿಲ್ಲ” ಮೋದಿ ಸಂದೇಶ
ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾಪಕ್ಷ ಗೆದ್ದು ಬೀಗಿದೆ. ಕಾರ್ಯಕರ್ತರ ಜಯಘೋಷ ಮುಗಿಲುಮುಟ್ಟಿದೆ. ಈ ಸನ್ನಿವೇಶದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತಮ್ಮದೇ ಶೈಲಿಯಲ್ಲಿ ಬಣ್ಣಿಸಿದ್ದಾರೆ. ಜನಶಕ್ತಿಯೇ ಸರ್ವಶ್ರೇಷ್ಠ! ಅಭಿವೃದ್ಧಿ ಗೆಲ್ಲುತ್ತದೆ, ಉತ್ತಮ ಆಡಳಿತ ಗೆಲ್ಲುತ್ತದೆ ಎಂದವರು ಹೇಳಿದ್ದಾರೆ. ದೆಹಲಿ ಚುನಾವಣಾ ಫಲಿತಾಂಶ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿ ಪ್ರತಿಕ್ರಿಯಿಸಿರುವ ಮೋದಿ, ಬಿಜೆಪಿಗೆ ಈ ಅದ್ಭುತ ಮತ್ತು ಐತಿಹಾಸಿಕ ಜನಾದೇಶಕ್ಕಾಗಿ ದೆಹಲಿಯ ನನ್ನ ಪ್ರೀತಿಯ ಸಹೋದರ ಸಹೋದರಿಯರಿಗೆ ನಮಸ್ಕರಿಸುತ್ತೇನೆ. ಈ ಆಶೀರ್ವಾದಗಳನ್ನು ಸ್ವೀಕರಿಸಲು ನಮಗೆ ವಿನಮ್ರತೆ ಮತ್ತು ಗೌರವವಿದೆ ಎಂದಿದ್ದಾರೆ. ದೆಹಲಿಯನ್ನು ಅಭಿವೃದ್ಧಿಪಡಿಸುವಲ್ಲಿ, ಜನರ ಒಟ್ಟಾರೆ ಜೀವನ ಮಟ್ಟವನ್ನು ಸುಧಾರಿಸುವಲ್ಲಿ ಮತ್ತು ವಿಕ್ಷಿತ ಭಾರತವನ್ನು ನಿರ್ಮಿಸುವಲ್ಲಿ ದೆಹಲಿಗೆ ಪ್ರಮುಖ ಪಾತ್ರವಿದೆ ಎಂದು ಖಚಿತಪಡಿಸಿಕೊಳ್ಳುವಲ್ಲಿ ನಾವು ಯಾವುದೇ ಅವಕಾಶವನ್ನು ಬಿಟ್ಟುಕೊಡುವುದಿಲ್ಲ ಎಂದವರು ಭರವಸೆ ನೀಡಿದ್ದಾರೆ. Jana Shakti is paramount! Development wins, good governance…
