ಉಡುಪಿ: ಮೀನು ಕದ್ದ ಆರೋಪದ ಮೇಲೆ ಮಹಿಳೆಯನ್ನು ಮರಕ್ಕೆ ಕಟ್ಟಿ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಐದು ಜನರನ್ನು ಪೊಲೀಸರು ಬಂಧಿಸಿರುವ ಬೆನ್ನಲ್ಲೀ ಇದೀಗ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ವಿರುದ್ಧ ಪ್ರಕರಣ ದಾಖಲಾಗಿದೆ. ಮೀನುಗಾರರ ಬಂಧನ ವಿರೋಧಿಸಿ ಶನಿವಾರ ಮಲ್ಪೆ ಮೀನುಗಾರರ ಸಂಘಟನೆಗಳು ಮಲ್ಪೆ ಬಂದರಿನಲ್ಲಿ ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಪ್ರಮೋದ್ ಮಧ್ವರಾಜ್ ವಿರುದ್ಧ ಮಲ್ಪೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮಹಿಳೆಯನ್ನು ಕಟ್ಟಿಹಾಕಿ ಎರಡು ಏಟು ಕೊಟ್ಟದ್ದನ್ನು ಸಮರ್ಥಿಸಿಕೊಂಡಿದ್ದ ಪ್ರಮೋದ್ ಮಧ್ವರಾಜ್, ಕಳ್ಳರನ್ನು ಕಟ್ಟಿ ಹಾಕದೆ ಇನ್ನೇನು ಮಾಡಲು ಸಾಧ್ಯ? ಎಂದು ಪ್ರತಿಭಟನೆಯಲ್ಲಿ ಹೇಳಿದ್ದಾರೆ ಎನ್ನಲಾಗಿದ್ದು, ಈ ಹೇಳಿಕೆ ಹಿನ್ನೆಲೆಯಲ್ಲಿಮಲ್ಪೆ ಠಾಣೆ ಪೊಲೀಸರು ಸ್ವಯಂಪ್ರೇರಿತ ತನಿಖೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Tag: Nava Karnataka News
ಕ್ಷೇತ್ರ ಮರುವಿಂಗಡಣೆಯಿಂದ ದಕ್ಷಿಣದ ರಾಜ್ಯಗಳಲ್ಲಿ ಕ್ಷೇತ್ರಗಳ ಸಂಖ್ಯೆ ಕಡಿಮೆಯಾಗಲಿದೆಯೇ? ಯುಪಿ ಬಿಹಾರ ಎಂಪಿ ರಾಜ್ಯಗಳಲ್ಲಿ ಹೆಚ್ಚಾಗಲಿವೆಯೇ?
ಬೆಂಗಳೂರು: ಕ್ಷೇತ್ರ ಮರುವಿಂಗಡಣೆ ನಡೆದಾಗ ದಕ್ಷಿಣದ ರಾಜ್ಯಗಳಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎನ್ನುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೇಳಿಕೆ ನಂಬಿಕೆಗೆ ಅರ್ಹವಾಗಿಲ್ಲ ಎಂದಿರುವ ಸಿಎಂ ಸಿದ್ದರಾಮಯ್ಯ, ಇದು ದಕ್ಷಿಣದ ರಾಜ್ಯಗಳಲ್ಲಿ ಗೊಂದಲ ಹುಟ್ಟಿಸುವ ದುರುದ್ದೇಶದಿಂದ ಕೂಡಿದೆ ಎಂದಿದ್ದಾರೆ. ಕೇಂದ್ರ ಗೃಹ ಸಚಿವರ ಬೀಸು ಹೇಳಿಕೆಯನ್ನು ನೋಡಿದರೆ ಅವರಿಗೆ ಒಂದೋ ಮಾಹಿತಿಯ ಕೊರತೆ ಇದೆ, ಇಲ್ಲವಾದರೆ ಕರ್ನಾಟಕವೂ ಸೇರಿದಂತೆ ದಕ್ಷಿಣದ ರಾಜ್ಯಗಳಾದ ತೆಲಂಗಾಣ, ತಮಿಳುನಾಡು, ಕೇರಳ ಮತ್ತು ಆಂಧ್ರಪ್ರದೇಶಗಳಿಗೆ ಅನ್ಯಾಯ ಮಾಡುವ ದುರುದ್ದೇಶ ಇದೆ ಎಂದು ಅರ್ಥಮಾಡಿಕೊಳ್ಳಬಹುದು ಎಂದು ಸಿದ್ದರಾಮಯ್ಯ ವಿಶ್ಲೇಷಣೆ ಮಾಡಿದ್ದಾರೆ. ದಕ್ಷಿಣದ ರಾಜ್ಯಗಳಿಗೆ ಅನ್ಯಾಯ ಮಾಡಬಾರದೆಂಬ ಸದುದ್ದೇಶ ಕೇಂದ್ರ ಸರ್ಕಾರ ಹೊಂದಿರುವುದಾಗಿದ್ದರೆ ಕ್ಷೇತ್ರ ಮರುವಿಂಗಡಣೆಯನ್ನು ಜನಸಂಖ್ಯೆಯ ಅನುಪಾತದ ಆಧಾರದಲ್ಲಿ ಮಾಡಲಾಗುವುದೋ? ಇಲ್ಲವೇ ಲೋಕಸಭಾ ಸದಸ್ಯರ ಈಗಿನ ಸಂಖ್ಯೆಯ ಅನುಪಾತದಲ್ಲಿ ಮಾಡಲಾಗುವುದೋ? ಎಂಬ ಮುಖ್ಯ ಪ್ರಶ್ನೆಗೆ ಗೃಹ ಸಚಿವರು ಉತ್ತರಿಸಬೇಕಾಗುತ್ತದೆ. ಎಂದಿರುವ ಸಿದ್ದರಾಮಯ್ಯ, ಇತ್ತೀಚಿನ…
ಮೋದಿ ಸರ್ಕಾರದ ‘PAN 2.0’ ಯಾಕೆ? ನೀವೇನು ಮಾಡಬೇಕು? ಇಲ್ಲಿದೆ ಮಾಹಿತಿ
ಭಾರತ ಸರ್ಕಾರವು ‘PAN 2.0’ ಯೋಜನೆಯನ್ನು ಪ್ರಾರಂಭಿಸುವುದರೊಂದಿಗೆ ಡಿಜಿಟಲ್ ರೂಪಾಂತರದತ್ತ ಮಹತ್ವಪೂರ್ಣ ಹೆಜ್ಜೆ ಇಟ್ಟಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಈ ಉಪಕ್ರಮವನ್ನು ಕೈಗೊಂಡಿಡೇ. ಇದರ ಪ್ರಾಥಮಿಕ ಗುರಿ ತೆರಿಗೆದಾರರ ಗುರುತನ್ನು ಆಧುನೀಕರಿಸಿ ಭದ್ರತೆ ಮತ್ತು ದಕ್ಷತೆಯನ್ನು ಖಚಿತಪಡಿಸುವುದಾಗಿದೆ. ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ಘೋಷಿಸಿರುವ ‘PAN 2.0’, ವರ್ಧಿತ ಕಾರ್ಯಕ್ಷಮತೆ ಮತ್ತು ದೃಢೀಕರಣಕ್ಕಾಗಿ QR ಕೋಡ್ಗಳನ್ನು ಸಂಯೋಜಿಸುತ್ತದೆ. 1,435 ಕೋಟಿ ರೂ.ಗಳ ಮೀಸಲಾದ ಬಜೆಟ್ನೊಂದಿಗೆ, ಈ ಯೋಜನೆಯು ತೆರಿಗೆ ಸಂಬಂಧಿತ ಕಾರ್ಯಗಳನ್ನು ಸುಗಮಗೊಳಿಸಲು ಮತ್ತು ಭಾರತದಲ್ಲಿ ಡಿಜಿಟಲ್ ಆರ್ಥಿಕತೆಯನ್ನು ಪ್ರೋತ್ಸಾಹಿಸಲು ಸಜ್ಜಾಗಿದೆ. ‘PAN 2.0’ ಯೋಜನೆ ಎಂದರೇನು? ‘PAN 2.0’ ಒಂದು ಹೊಸ ಮತ್ತು ಸುಧಾರಿತ ಇ-ಆಡಳಿತ ವ್ಯವಸ್ಥೆಯಾಗಿದೆ, ಇದು ತೆರಿಗೆದಾರರ ನೋಂದಣಿಯನ್ನು ಸರಳಗೊಳಿಸಲು ವಿನ್ಯಾಸಗೊಳಿಸಲಾಗಿದೆ. ಈ ಯೋಜನೆ PAN (ಶಾಶ್ವತ ಖಾತೆ ಸಂಖ್ಯೆ) ಮತ್ತು TAN (ತೆರಿಗೆ ಕಡಿತ ಮತ್ತು…
ಬೆಂಗಳೂರು ವಿವಿ: ನಾರಾಯಣಸ್ವಾಮಿ ಬಿ.ವಿ. ಅವರಿಗೆ ಪಿಎಚ್.ಡಿ ಪ್ರದಾನ
ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಸಂಶೋಧನಾ ವಿದ್ಯಾರ್ಥಿಯಾಗಿರುವ ನಾರಾಯಣಸ್ವಾಮಿ ಬಿ.ವಿ. ಅವರಿಗೆ ಪಿಎಚ್.ಡಿ ಪ್ರದಾನ ಮಾಡಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ದೊಡ್ಡ ಬೊಮ್ಮನಹಳ್ಳಿ ಗ್ರಾಮದ ರೈತಾಪಿ ಕುಟುಂಬಕ್ಕೆ ಸೇರಿದ ಅಕ್ಕಯಮ್ಮ ಮತ್ತು ವೆಂಕಟೇಶಪ್ಪ ರವರ ಪುತ್ರರಾದ ನಾರಾಯಣಸ್ವಾಮಿ ಬಿ.ವಿ.ರವರು ಪ್ರಸ್ತುತ ಬೆಂಗಳೂರು ವಿವಿಯಲ್ಲಿ ತಾತ್ಕಾಲಿಕ ಸಹಾಯಕ ಗ್ರಂಥಪಾಲಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಬೆಂಗಳೂರು ವಿಶ್ವವಿದ್ಯಾಲಯದ ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಸಂಶೋಧನಾ ವಿದ್ಯಾರ್ಥಿಯಾಗಿರುವ ನಾರಾಯಣಸ್ವಾಮಿ ಬಿ.ವಿ. ರವರು ಗ್ರಂಥಾಲಯ ಮತ್ತು ಮಾಹಿತಿ ವಿಜ್ಞಾನ ವಿಭಾಗದ ಹಿರಿಯ ಪ್ರಾಧ್ಯಾಪಕರಾದ ಪ್ರೊ.ರಮೇಶ್ ರವರ ಮಾರ್ಗದರ್ಶನದಲ್ಲಿ ಮಂಡಿಸಿದ “ಅವೇರ್ನೆಸ್ ಅಂಡ್ ಯುಟಿಲೈಜೇಷನ್ ಆಫ್ ಐಸಿಟಿ ಇನಿಶಿಯೇಟಿವ್ ಆಫ್ ಮಿನಿಸ್ಟ್ರಿ ಆಫ್ ಎಜುಕೇಶನ್, ಗವರ್ನಮೆಂಟ್ ಆಫ್ ಇಂಡಿಯಾ ಬೈ ದ ಯೂನಿವರ್ಸಿಟಿ ಲೈಬ್ರರೀಸ್ ಇನ್ ಕರ್ನಾಟಕ ಸ್ಟೇಟ್, ಆನ್ ಯೂಸರ್ ಅಸೆಸ್ಮೆಂಟ್ ಸ್ಟಡಿ” ಎಂಬ ಸಂಶೋಧನಾ…
MCC ಹಗರಣ: 33 ಬ್ಯಾಂಕ್ ಸದಸ್ಯರ ದೂರಿನ ಹಿನ್ನೆಲೆ ಸರ್ಕಾರದಿಂದ ಪರಿಶೀಲನೆ ಬಿರುಸು
ಬೆಂಗಳೂರು: ಎಂಸಿಸಿ ಬ್ಯಾಂಕ್ ಹಗರಣಕ್ಕೆ ರೋಚಕ ತಿರುವು ಸಿಕ್ಕಿದೆ. ಹಲವಾರು ಅಕ್ರಮ ಆರೋಪಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಹಾಗೂ ಅಕ್ರಮಗಳಿಂದ ರೋಸಿಹೋದ ಸದಸ್ಯರೊಬ್ಬರು ಸಾವಿಗೆ ಶರಣಾದ ಪ್ರಕರಣ ಹಿನ್ನೆಲೆಯಲ್ಲಿ ಎಂಸಿಸಿ ಬ್ಯಾಂಕ್ ಸೂಪರ್ಸೀಡ್ ಮಾಡಬೇಕೆಂಬ ಆಗ್ರಹ ಹೆಚ್ಚಾಗಿದೆ. ಈ ಕುರಿತಂತೆ ಎಂಸಿಸಿ ಬ್ಯಾಂಕಿನ ಸುಮಾರು 33 ಸದಸ್ಯರು ಸಿಎಂ ಸಿದ್ದರಾಮಯ್ಯ ಹಾಗೂ ಮುಖ್ಯಕಾರ್ಯದರ್ಶಿ ಸಹಿತ ಸರ್ಕಾರದ ಪ್ರಮುಖರಿಗೆ ದೂರು ಸಲ್ಲಿಸಿದ್ದಾರೆ. ಈ ದೂರನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಗಳು ಎಂಸಿಸಿ ಬ್ಯಾಂಕಿನ ವಿರುದ್ದದ ಆರೋಪಗಳ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಸಹಕಾರ ಇಲಾಖೆಗೆ ನಿರ್ದೇಶನ ನೀಡಿದ್ದಾರೆ. ಈ ಬಗ್ಗೆ ಇಲಾಖಾ ಅಧಿಕಾರಿಗಳ ಪರಿಶೀಲನಾ ವರದಿ ನಂತರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಹಕಾರ ಇಲಾಖೆಯ ಅಧಿಕಾರಿಗಳ ಮಾಹಿತಿ ಹಂಚಿಕೊಂಡಿದ್ದಾರೆ. ‘ಮಂಗಳೂರು ಕೆಥೋಲಿಕ್ ಸಹಕಾರ ಬ್ಯಾಂಕ್ (MCC Bank) ಬಹುಕೋಟಿ ರೂಪಾಯಿ ಅವ್ಯವಹಾರ ಆರೋಪ ಪ್ರಕರಣಕ್ಕೆ ರೋಚಕ…
ಪ್ರಯಾಗ್ರಾಜ್ನಲ್ಲಿ ಮಹಾಕುಂಭ; ಭಕ್ತಕೋಟಿ ಭವ್ಯ ಆಧ್ಯಾತ್ಮಿಕ ಸ್ವಾಗತ ನೀಡಿದ ಯೋಗಿ
ನವದೆಹಲಿ: ಪ್ರಯಾಗ್ರಾಜ್ನಲ್ಲಿ ಸೋಮವಾರ ಮಹಾಕುಂಭ 2025 ಪ್ರಾರಂಭವಾಗುತ್ತಿದ್ದಂತೆ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪೌಷ ಪೂರ್ಣಿಮೆಯ ಶುಭ ಸಂದರ್ಭದಲ್ಲಿ ಭಕ್ತಕೋಟಿಯನ್ನು ಭವ್ಯ ಆಧ್ಯಾತ್ಮಿಕ ಸಭೆಗೆ ಸ್ವಾಗತಿಸಿದ್ದಾರೆ. ಭಕ್ತರು, ಸಂತರು ಮತ್ತು ಕಲ್ಪವಾಸಿಗಳನ್ನು ಭವ್ಯ ಆಧ್ಯಾತ್ಮಿಕ ಸಭೆಗೆ ಸ್ವಾಗತಿಸಿರುವ ಸಿಎಂ ಯೋಗಿ, ಮಹಾಕುಂಭ ಪ್ರತಿನಿಧಿಸುವ ನಂಬಿಕೆ ಮತ್ತು ಆಧುನಿಕತೆಯ ಸಂಗಮ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಮಾಧ್ಯಮ ‘X’ನಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ‘ಪೌಷ ಪೂರ್ಣಿಮೆಯ ಶುಭಾಶಯಗಳು. ವಿಶ್ವದ ಅತಿದೊಡ್ಡ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಸಭೆ ‘ಮಹಾಕುಂಭ’ ಪವಿತ್ರ ನಗರವಾದ ಪ್ರಯಾಗ್ರಾಜ್ನಲ್ಲಿ ಪ್ರಾರಂಭವಾಗುತ್ತಿದೆ. ವೈವಿಧ್ಯತೆಯಲ್ಲಿ ಏಕತೆಯನ್ನು ಅನುಭವಿಸಲು, ಧ್ಯಾನ ಮಾಡಲು ಮತ್ತು ನಂಬಿಕೆ ಮತ್ತು ಆಧುನಿಕತೆಯ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲು ಬಂದಿರುವ ಎಲ್ಲಾ ಪೂಜ್ಯ ಸಂತರು, ಕಲ್ಪವಾಸಿಗಳು ಮತ್ತು ಭಕ್ತರನ್ನು ಹೃತ್ಪೂರ್ವಕವಾಗಿ ಸ್ವಾಗತಿಸಲಾಗುತ್ತದೆ. ಗಂಗಾ ಮಾತೆ ನಿಮ್ಮ ಎಲ್ಲಾ ಆಸೆಗಳನ್ನು ಈಡೇರಿಸಲಿ’ ಎಂದಿದ್ದಾರೆ. ‘ಸನಾತನ…
ರಾಜ್ಯದಲ್ಲಿ HSRP ಅಕ್ರಮಕ್ಕೆ ಅವಕಾಶ ಇಲ್ಲ; ಕೇಂದ್ರ ಮಾರ್ಗಸೂಚಿ ಮೀರಲ್ಲ; ರಾಮಲಿಂಗ ರೆಡ್ಡಿ ನಿರ್ಧಾರಕ್ಕೆ ಸ್ವಾಗತ
ಬೆಂಗಳೂರು: ರಾಜ್ಯದಲ್ಲಿ ವಾಹನಗಳಿಗೆ ಅತೀ ಸುರಕ್ಷಾ ನೋಂದಣಿ ಫಲಕ (HSRP) ಅಳವಡಿಸುವ ಯೋಜನೆ ಜಾರಿಗೆ ವಿಚಾರದಲ್ಲಿ ಬೆಂಗಳೂರು ವಿವಿ ಸಂಶೋಧನಾ ವಿದ್ಯಾರ್ಥಿಗಳ ಒಕ್ಕೂಟ ಆರಂಭಿಸಿರುವ ಹೋರಾಟಕ್ಕಷ್ಟೇ ವಿವಿಧ ಸಂಘಟನೆಗಳು ಬೆಂಬಲ ಘೋಷಿಸಿವೆ. ಇದೇ ವೇಳೆ, ಹಿಂದಿನ ಸರ್ಕಾರದ ಅವಧಿಯಲ್ಲಿ ತಪ್ಪುಗಳು ಆಗಿದ್ದರೆ ಸರಿಪಡಿಸುವುದಾಗಿ ಭರವಸೆ ನೀಡಿರುವ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರನ್ನು ರಾಜ್ಯದ ಭ್ರಷ್ಟಾಚಾರ ವಿರೋಧಿ ಹೋರಾಟ ಸಮಿತಿ ಹಾಗೂ ಸಮತಾ ಸೈನಿಕ ದಳ ವಿದ್ಯಾರ್ಥಿ ಒಕ್ಕೂಟ ಅಭಿನಂಧಿಸಿದೆ. ಅಪರಾಧ ಕೃತ್ಯಗಳನ್ನು ತಡೆಯಲು ಹಾಗೂ, ಕಾನೂನು ಉಲ್ಲಂಘನೆಯಂತಹಾ ಪ್ರಕರಣಗಳನ್ನು ಬೇಧಿಸಲು ಅನುಕೂಲವಾಗುವಂತೆ HSRP ಅಳವಡಿಕೆ ಕಡ್ಡಾಯಗೊಳಿಸಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದ್ದು, ಇದಕ್ಕಾಗಿ ವಿಶಿಷ್ಟ ನಂಬರ್ ಪ್ಲೇಟ್’ಗಳನ್ನು ತಯಾರಿಸುವ ಸುಮಾರು 20 ಕಂಪನಿಗಳಿಗೆ ಕೇಂದ್ರ ಹೆದ್ದಾರಿ ಸಚಿವಾಲಯ ಅನುಮೋದನೆ ನೀಡಿದೆ. ಆದರೆ ಕರ್ನಾಟಕದಲ್ಲಿ ಕೆಲವು ಮಾಫಿಯಾಗಳ ಒತ್ತಡಕ್ಕೊಳಗಾಗಿ ಕೇವಲ 4-5 ಕಂಪನಿಗಳ ಉತ್ಪನ್ನಗಳಿಗಷ್ಟೇ ಅನುಮತಿ ನೀಡಲು…
ಅಕ್ಕಿ ಜಟಾಪಟಿ; ಅಮಿತ್ ಷಾ ಅವರಿಗೆ ಸಿದ್ದರಾಮಯ್ಯ ಮನವಿ
ಬೆಂಗಳೂರು: ಅನ್ನಭಾಗ್ಯ ಅಕ್ಕಿ ವಿತರಣೆ ವಿಚಾರದಲ್ಲಿ ರಾಜ್ಯ ಸರ್ಕಾರ ಕಠಿಣ ಹಾದಿಯಲ್ಲಿ ಸಾಗುವಂತಾಗಿದೆ. ಸಿಎಂ ಸಿದ್ದರಾಮಯ್ಯ ಅವರ ಮನವಿಗೆ ಕೇಂದ್ರ ಸರ್ಕಾರ ಸ್ಪಂದಿಸಿಲ್ಲ ಎಂದು ಕಾಂಗ್ರೆಸ್ ಆರೋಪಿಸುತ್ತಿದ್ದಾರೆ, ಪ್ರತಿಪಕ್ಷ ಬಿಜೆಪಿ ನಾಯಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕಿಳಿದಿದೆ. ಈ ನಡುವೆ, ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದ ಬೇಡಿಕೆ ಬಗ್ಗೆ ಗಮನಸೆಳೆದಿದ್ದಾರೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಸಿದ್ದರಾಮಯ್ಯ, ಸಂದರ್ಭದಲ್ಲಿ ಎಫ್.ಸಿ.ಐ ಅಕ್ಕಿ ನೀಡುವ ವಿಚಾರದಲ್ಲಿ ಒಪ್ಪಿಗೆ ಪತ್ರವನ್ನು ನೀಡಿ ಮರುದಿನವೇ ಅಕ್ಕಿ ವಿತರಣೆಯನ್ನು ರಾಜ್ಯಗಳಿಗೆ ಸ್ಥಗಿತಗೊಳಿಸಿಗಿರುವ ವಿಚಾರವನ್ನು ಗಮನಕ್ಕೆ ತರಲಾಗಿದೆ ಎಂದಿದ್ದಾರೆ. ಅಕ್ಕಿ ವಿತರಣೆ ಬಗ್ಗೆ ರಾಜಕೀಯ ಅಥವಾ ದ್ವೇಷದ ರಾಜಕಾರಣ ಮಾಡುವುದು ಬೇಡ ಎಂದು ತಿಳಿಸಿದ್ದೇನೆ. ಅವರು ಸಂಬಂಧಪಟ್ಟ ಮಂತ್ರಿಗಳಿಗೆ ಮಾತನಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ನಿನ್ನೆ ಕೇಂದ್ರ ಗೃಹ…
ಶಾಲಾ ಮಕ್ಕಳ ಚೀಲದ ಹೊರೆ ತಗ್ಗಿಸುವ ಸಂಬಂಧ ಶಿಕ್ಷಣ ಇಲಾಖೆ ಮಹತ್ವದ ಆದೇಶ
ಬೆಂಗಳೂರು: ಶಾಲಾ ಮಕ್ಕಳ ಚೀಲದ ಹೊರೆ ತಗ್ಗಿಸುವ ಸಂಬಂಧ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಯಾವ ತರಗತಿಯ ಮಕ್ಕಳಿಗೆ ಎಷ್ಟು ತೂಕದ ಚೀಲದ ಹೊರೆ ಇರಬೇಕೆಂಬ ಬಗ್ಗೆ ಸುತ್ತೋಲೆಯಲ್ಲಿ ಹೇಳಲಾಗಿದೆ. ವಿದ್ಯಾರ್ಥಿಗಳು ಅವರ ದೇಹದ ತೂಕದ ಶೇಕಡ 10ರಷ್ಟು ತೂಕದ ಶಾಲಾ ಬ್ಯಾಗ್ಗಳನ್ನು ಹೊರಬಹುದು ಎಂಬ ಮೂಳೆ ತಜ್ಞರ ಶಿಫಾಸು ಆಧರಿಸಿ ಶಾಲಾ ಮಕ್ಕಳ ಬ್ಯಾಗ್ ಹೊರೆ ಇಳಿಸುವ ಬಗ್ಗೆ ಶಿಕ್ಷಣ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಎಲ್ಲಾ ಶಾಲೆಗಳಲ್ಲಿ 1 ರಿಂದ 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಶಾಲಾ ಬ್ಯಾಗ್ ಹೊರೆ ಕಡಿಮೆ ಮಾಡಲು ಸೂಕ್ತ ಅಂಶಗಳನ್ನು ಆಧರಿಸಿ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಲಾಗಿದೆ. ಮಕ್ಕಳ ಚೀಲದ ತೂಕ ಇಷ್ಟೇ ಇರಬೇಕು: 1ರಿಂದ 2ನೇ ತರಗತಿ ವರೆಗಿನ ಮಕ್ಕಳಿಗೆ 1.5 ರಿಂದ 2 ಕಿಲೋ 3ರಿಂದ 5ನೇ ತರಗತಿ…
ವಿದ್ಯುತ್ ದರ ಏರಿಕೆಯನ್ನು ವಿರೋಧಿಸಿ ಜೂ.22 ರಂದು ಕರ್ನಾಟಕ ಬಂದ್ಗೆ ಕರೆ
ಬೆಂಗಳೂರು: ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿರುವ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಇದೀಗ ಆರಂಭಿಕ ಆಘಾತವಾಗಿದೆ. ಅಚ್ಚರಿಯ ಬೆಳವಣಿಗೆಯಲ್ಲಿ ಕೈಗಾರಿಕೋದ್ಯಮಿಗಳು ಕರ್ನಾಟಕ ಬಂದ್ ಕರೆ ನೀಡುವ ಮೂಲಕ ಸಿದ್ದರಾಮಯ್ಯ ಸರ್ಕಾರದ ವಿರುದ್ದ ಸಮರ ಸಾರಿದ್ದಾರೆ. ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಯನ್ನು ವಿರೋಧಿಸಿ ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟ್ರಿ (KCC&I) ಜೂನ್ 22 ರಂದು ಕರ್ನಾಟಕ ಬಂದ್ಗೆ ಕರೆ ನೀಡಿದೆ. ರಾಜ್ಯ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಕೈಗಾರಿಕೋದ್ಯಮಿಗಳು, ವಿದ್ಯುತ್ ದರ ಏರಿಕೆಯನ್ನು ಹಿಂಪಡೆಯುವಂತೆ ಜೂ.10 ರಂದು ಸರ್ಕಾರಕ್ಕೆ ಮನವಿ ಮಾಡಿದ್ದರು. ಈ ಬಗ್ಗೆ ತೀರ್ಮಾನ ಕೈಗೊಳ್ಳುವಂತೆ ಸರ್ಕಾರಕ್ಕೆ ಕೆಸಿಸಿಐ ಒಂದು ವಾರಗಳ ಗಡುವು ವಿಧಿಸಿತ್ತು. ದರ ಏರಿಕೆ ಆದೇಶವನ್ನು ಹಿಂಪಡೆಯದಿದ್ದಲ್ಲಿ ಎಲ್ಲಾ ಕೈಗಾರಿಕೆಗಳನ್ನೂ ಬಂದ್ ಮಾಡಿ ಪ್ರತಿಭಟನೆಯ ಎಚ್ಚರಿಕೆಯನ್ನೂ ನೀಡಿತ್ತು. ಈ ಎಚ್ಚರಿಕೆಗೆ ಸರ್ಕಾರ ಸ್ಪಂದಿಸದ ಹಿನ್ನೆಲೆಯಲ್ಲಿ ರಾಜ್ಯ ಬಂದ್ಗೆ…