ನೈಸ್ ಕರ್ಮಕಾಂಡ: ರೈತರ ಭೂಮಿ ವಾಪಸ್ ಕೊಡಿಸದಿದ್ದರೆ ಸಿಂಗೂರು ಮಾದರಿ ಹೋರಾಟ; ಹೆಚ್ಡಿಕೆ ರಣಕಹಳೆ

ಬೆಂಗಳೂರು: ನೈಸ್ ಯೋಜನೆ ಹೆಸರಿನಲ್ಲಿ ಅಕ್ರಮವಾಗಿ ಕಬಳಿಸಿರುವ 11,000 ಸಾವಿರ ಎಕರೆ ಭೂಮಿಯನ್ನು ರಾಜ್ಯ ಸರಕಾರ ವಾಪಸ್ ಪಡೆದು ರೈತರಿಗೆ ಕೊಡಬೇಕು. ಇಲ್ಲವಾದರೆ ಪಶ್ಚಿಮ ಬಂಗಾಳದಲ್ಲಿ ನಡೆದ ಸಿಂಗೂರು ಮಾದರಿ ಹೋರಾಟವನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ. ಶಾಸಕರ ಭವನದಲ್ಲಿ ನೈಸ್ ಸಂತ್ರಸ್ತ ರೈತರ ಹೋರಾಟ ಸಮಿತಿ ಮತ್ತು ಕರ್ನಾಟಕ ಪ್ರಾಂತ್ಯ ರೈತರ ಸಂಘ ಹಮ್ಮಿಕೊಂಡಿದ್ದ ದುಂಡುಮೇಜಿನ ಸಭೆಯಲ್ಲಿ ಮಾತನಾಡಿದ ಅವರು, ನೈಸ್ ಭೂಮಿ ಕಳೆದುಕೊಂಡಿರುವ ರೈತರು ನಡೆಸುತ್ತಿರುವ ಈ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ. ಈ ಹೋರಾಟ ಪಕ್ಷಾತೀತ, ರಾಜಕೀಯಕ್ಕೆ ಅತೀತವಾಗಿ ನಡೆಯಬೇಕು. ಸರ್ಕಾರ ಭೂಮಿಯನ್ನು ವಾಪಸ್ ಕೊಡದಿದ್ದರೆ ಸಿಂಗೂರು ಮಾದರಿ ಹೋರಾಟ ಆರಂಭ ಮಾಡೋಣ. ಯೋಜನೆಯನ್ನು ಕೈಗೆತ್ತಿಕೊಳ್ಳದಿದ್ದರೆ ಭೂಮಿಯನ್ನು ರೈತರಿಗೆ ವಾಪಸ್ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಆ ನಿಟ್ಟಿನಲ್ಲಿ ಪಶ್ಚಿಮ ಬಂಗಾಳ ಸರ್ಕಾರ 5000 ಎಕರೆ…

ಡಿಕೆ ಬ್ರದರ್ಸ್‌’ಗೆ ಸವಾಲಾದ ಹೆಚ್ಡಿಕೆ; ನಾಳೆ ಅಥವಾ ನಾಡಿದ್ದು ನೈಸ್‌ ಅಕ್ರಮಗಳ ದಾಖಲೆ ಬಹಿರಂಗ

ಎಂಪಿ ಆಗುವುದಕ್ಕೆ ಮುಂಚೆ ಡಿ.ಕೆ.ಸುರೇಶ್‌ ಆಸ್ತಿ ಎಷ್ಟಿತ್ತು? ಈಗ ಎಷ್ಟಿದೆ? ನೈಸ್‌ ಮಾಡಿರುವ ಲೂಟಿಯಲ್ಲಿ ಡಿಕೆ ಸಹೋದರರ ಪಾಲು ಎಷ್ಟಿದೆ? ಹೆಚ್ಡಿಕೆ ಪ್ರಶ್ನೆ ರಾಮನಗರ: ನೈಸ್‌ ಅಕ್ರಮಗಳು, ಬೆಂಗಳೂರು ಸುತ್ತಮುತ್ತ ರೈತರ ಭೂಮಿ ಕೊಳ್ಳೆ ಹೊಡೆದ ವಿಷಯಕ್ಕೆ ಸಂಬಂಧಿಸಿದಂತೆ ಡಿಕೆ ಸಹೋದರರ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, 2004ರಲ್ಲಿ ಡಿ.ಕೆ.ಶಿವಕುಮಾರ್‌ ಅವರು ನಗರಾಭಿವೃದ್ಧಿ ಮಂತ್ರಿ ಆಗಿದ್ದಿದ್ದು ರಾಮನಗರ ಜಿಲ್ಲೆಯ ಉದ್ಧಾರಕ್ಕೋ ಅಥವಾ ನೈಸ್‌ ಕಂಪನಿಯನ್ನು ಉದ್ಧಾರ ಮಾಡಿ ರೈತರ ಭೂಮಿ ಲೂಟಿ ಹೊಡೆಯಲಿಕ್ಕೋ? ಎಂಪಿ ಆಗುವುದಕ್ಕೆ ಮುಂಚೆ ಡಿ.ಕೆ.ಸುರೇಶ್‌ ಆಸ್ತಿ ಎಷ್ಟಿತ್ತು? ಈಗ ಎಷ್ಟಿದೆ? ಎಂದು ಪ್ರಶ್ನಿಸಿದ್ದಾರೆ. ರಾಮನಗರದಲ್ಲಿ ಮಾಧ್ಯಮಗಳ ಜತೆ ಮಾತನಾಡುತ್ತಾ ಡಿಕೆ ಸಹೋದರರ ವಿರುದ್ಧ ಅವರು ತೀವ್ರ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, ನಾಳೆ ಅಥವಾ ನಾಡಿದ್ದು ನೈಸ್‌ ಅಕ್ರಮಗಳು, ಡಿಕೆ ಸಹೋದರು ಕೊಳ್ಳೆ ಹೊಡೆದಿರುವ ನೈಸ್‌ ಭೂಮಿಯ ದಾಖಲೆಗಳನ್ನು ಬಹಿರಂಗ…