ಕರಾಚಿ: ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಪಾಕ್ ಪ್ರೇರಿತ ಉಗ್ರರ ವಿರುದ್ದದ ಕಾರ್ಯಾಚರಣೆ ಇದೀಗ ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಸನ್ನಿವೇಶಕ್ಕೆ ತಿರುಗಿದೆ. ಕಳೆದೆರಡು ದಿನಗಳಲ್ಲಿ ಭಾರತ ಮತ್ತು ಪಾಕಿಸ್ತಾನ ಮಿಲಿಟರಿ ಪಡೆಗಳ ನಡುವೆ ಸಮರ ನಡೆಯುತ್ತಿದ್ದು, ಗುರುವಾರ ನಡೆದ ಕಾರ್ಯಾಚರಣೆ ಜಗತ್ತನ್ನೇ ಬೆಚ್ಚಿ ಬೀಳಿಸಿದೆ. ಭಾರತೀಯ ಸೇನಾ ನೆಲೆಯನ್ನೇ ಪಾಕಿಸ್ತಾನ ಗುರಿಯಾಗಿಸಿ ದಾಳಿ ಮಾಡಲು ಮುಂದಾಗಿದೆ. ಆದರೆ ಕ್ಷಿಪ್ರ ಪ್ರತಿರೋಧ ತಾಳಿದ ಭಾರತವು ಪಾಕ್ ಸೇನೆಯ ಡ್ರೋನ್ಗಳನ್ನು ಹೊಡೆದುರುಳಿಸಿದೆ. ಜಮ್ಮು ವಾಯುನೆಲೆ ಮೊದಲ ಟಾರ್ಗೆಟ್ ಆಗಿತ್ತಾದರೂ ಅನಂತರದಲ್ಲಿ ರಾಜೌರಿ, ಪಠಾಣ್ಕೋಟ್, ಪೂಂಚ್, ಅಖ್ನೂರ್, ಜೈಸಲ್ಮೇರ್, ತಂಗಹಾರ್ ಸುತ್ತಮುತ್ತಲ ಪ್ರದೇಶಗಳ ಮೇಲೆ ಪಾಕಿಸ್ತಾನ ಸೇನೆಯು ಡ್ರೋನ್ ದಾಳಿಗೆ ಯತ್ನಿಸಿದ್ದು, ಭಾರತೀಯ ಸೇನೆ ಅದನ್ನು ವಿಫಲಗೊಳಿಸಿದೆ. ಇದರ ಜೊತೆಗೆ ಭಾರತಕ್ಕೆ ಪಾಕಿಸ್ತಾನ ಸೇನೆ ಲಗ್ಗೆ ಹಾಕಲು ಮುಂದಾಗುತ್ತಿದ್ದಂತೆಯೇ, ಭಾರತ ಸೇನೆ, ಪಾಕಿಸ್ತಾನಕ್ಕೆ ನುಗ್ಗಿ ಹೊಡೆದಿದೆ. ಇಸ್ಲಾಮಾಬಾದ್, ಕರಾಚಿ, ಲಾಹೋರ್…