ಬೆಂಗಳೂರು: ಹನಿಟ್ರ್ಯಾಪ್ ವಿಚಾರ ರಾಜ್ಯ ರಾಜಕೀಯದಲ್ಲಿ ಕೋಲಾಹಲ ಎಬ್ಬಿಸಿದೆ. ಈ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಡುವೆ ವಾಗ್ಯುದ್ಧವೇ ನಡೆದಿದೆ. ಈ ನಡುವೆ ಹನಿಟ್ರ್ಯಾಪ್ ಕುರಿತಂತೆ ಆಡಳಿತಾರೂಢ ಕಾಂಗ್ರೆಸ್ ಪಕ್ಷವನ್ನು ತರಾಟೆಗೆ ತೇಗ್ವೆದುಕೊಂಡಿರುವ ಬಿಜೆಪಿ ನಾಯಕರು ವಿಧಾನ ಸಭೆ ಹಾಗೂ ವಿಧಾನ ಪರಿಷತ್ತುಗಳಲ್ಲಿ ಗದ್ದಲ ಎಬ್ಬಿಸಿವೆ. ಹನಿಟ್ರ್ಯಾಪ್ ಪ್ರಕರಣ ಬಗ್ಗೆ ಸಿಬಿಐ ತನಿಖೆಗೆ ವಹಿಸಬೇಕು ಹಾಗೂ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ನಾಯಕರು ಒತ್ತಾಯಿಸಿದ್ದಾರೆ. ಬಿಜೆಪಿ ಆಡಳಿತಾವಧಿಯಲ್ಲಿ 17 ಶಾಸಕರು ನ್ಯಾಯಾಲಯದಿಂದ ಸ್ಟೇ ತಂದಿದ್ದರು. ಇದರ ಬಗ್ಗೆ ಅಂದು ಚರ್ಚೆಗೆ ಅವಕಾಶವನ್ನೇ ನೀಡಲಿಲ್ಲ. ಹಾಗಿದ್ದರೆ ಇಂದು ಈ ವಿಷಯದಲ್ಲಿ ಚರ್ಚೆಯ ಅವಶ್ಯಕತೆ ಇದೆಯೇ? ಬಿಜೆಪಿಯವರಿಗೆ ಅಂದು ಇಲ್ಲದ ನೈತಿಕತೆಯ ಪ್ರಶ್ನೆ ಇಂದು ಹೇಗೆ ಹುಟ್ಟಿಕೊಂಡಿತು? – @PriyankKharge pic.twitter.com/H4QfxdojoM — Karnataka Congress (@INCKarnataka) March 21, 2025 ಬಿಜೆಪಿಯವರ ನಡೆಗೆ…
Tag: Priyank Kharge
ವಿಜಯೇಂದ್ರ ವಿರುದ್ದವೇ ಇಡಿ ಕೇಸ್ ಇದೆ; ಭ್ರಷ್ಟಾಚಾರ ಪ್ರಕರಣಗಳಿವೆ, ರಾಜೀನಾಮೆ ಕೊಡ್ತಾರ ಎಂದ ಕೈ ನಾಯಕರು
ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ದ ಕಾಂಗ್ರೆಸ್ ನಾಯಕರು, ಭ್ರಷ್ಟಾಚಾರ ಆರೋಪ ಪ್ರಸ್ತಾಪಿಸಿ ತರಾಟೆಗೆ ತೆಗೆದುಕೊಂಡಿದೆ. ಕೆಪಿಸಿಸಿ ಕಚೇರಿಯಲ್ಲಿ ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ, ಕಿಯೋನಿಕ್ಸ್ ಅಧ್ಯಕ್ಷ ಶರತ್ ಬಚ್ಚೇಗೌಡ, ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಉಪಸ್ಥಿತಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಸಚಿವ ಪ್ರಿಯಾಂಕ್ ಖರ್ಗೆ, ಚುನಾವಣಾ ಆಯೋಗಕ್ಕೆ ವಿಜಯೇಂದ್ರ ಅವರು ಸಲ್ಲಿಸಿರುವ ಅಫಿಡವಿಟ್ ಅಲ್ಲಿ ಅವರ ಮೇಲಿರುವ ಪ್ರಕರಣಗಳ ಬಗ್ಗೆ ಮಾಹಿತಿ ಕೊಟ್ಟಿದ್ದಾರೆ. 16.09. 2022 ರಂದು ಲೋಕಾಯುಕ್ತದಿಂದ ಇವರ ಮೇಲೆ ಭ್ರಷ್ಟಾಚಾರ ವಿರೋಧಿ ಕಾಯ್ದೆಯಡಿ ಸೆಕ್ಷನ್ 7 A, 9, 10, 13 ಹಾಗೂ 383, 384, 415, 418, 420 ಕಾಯ್ದೆಗಳಡಿ ದೂರು ದಾಖಲಿಸಲಾಗಿದೆ. ಅಕ್ರಮ ಹಣ ವರ್ಗವಣೆ ಪ್ರಕರಣದಲ್ಲಿ ಇವರಿಗೆ ಸಮನ್ಸ್ ಜಾರಿಯಾಗಿದೆ ಎಂದು ನೆನಪಿಸಿದರು. ಸಿಎಂ ಸಿದ್ದರಾಮಯ್ಯರ…