RSS ಮುಟ್ಟಿದರೆ ಸರ್ವನಾಶ ಆಗ್ತೀರಿ.. ತಾಕತ್ತಿದ್ದರೆ ಮುಟ್ಟಿ ನೋಡಿ.. ಕಾಂಗ್ರೆಸ್ ವಿರುದ್ದ ತೊಡೆ ತಟ್ಟಿದ ಆರ್.ಅಶೋಕ್

ಕಲಬುರಗಿ : ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲಾ ಗೂಂಡಾ ಸಂಸ್ಕೃತಿ ತಲೆ ಎತ್ತುತ್ತದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಕಿಡಿ ಕಾರಿದ್ದಾರೆ. ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುದ ಅವರು, ಬಿಜೆಪಿ ಕಾರ್ಯಕರ್ತನ ಮೇಲೆ ಕಲಬುರಗಿಯಲ್ಲಿ ವಿನಾ ಕಾರಣ ಹಲ್ಲೆ ನಡೆಸಿರುವ ಘಟನೆ ಇದಕ್ಕೆ ಸಾಕ್ಷಿ. ಉಡುಪಿಯಲ್ಲಿ ಇಬ್ಬರು ಭಜರಂಗದಳ ಕಾರ್ಯಕರ್ತರನ್ನು ಗಡಿಪಾರು ಮಾಡಲಾಗಿದೆ. ಹಿಂದೆ ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ 23 ಹಿಂದೂಗಳ ಹತ್ಯೆ ಮಾಡಲಾಯಿತು. ಎಲ್ಲೆಡೆ ಹಿಂದೂಗಳನ್ನು ಗುರಿಯಾಗಿಸಿ ಹಲ್ಲೆ, ಹತ್ಯೆ ಯತ್ನಗಳು ಹೆಚ್ಚುತ್ತಿವೆ. ಇದು ಗೂಂಡಾ ರಾಜ್ಯವಾಗಿ ಪರಿವರ್ತನೆ ಆಗಿದೆ ಎಂದು ದೂರಿದರು. RSS ಸಂಘಟನೆಯನ್ನು ಮುಟ್ಟಿದ್ರೆ ಕಾಂಗ್ರೆಸ್ ಸರ್ವನಾಶ ಆಗುತ್ತೆ ಎಂದು ಅಶೋಕ್ ಎಚ್ಚರಿಕೆ ನೀಡಿದರು. ಸರ್ಕಾರದ ಇಲಾಖೆಗಳು ಬಿಜೆಪಿ ಅವಧಿಯಲ್ಲಿ RSS ಶಾಖೆಗಳಾಗಿದ್ದವು, ಈಗ ಅವುಗಳನ್ನು ಕ್ಲೀನ್ ಮಾಡಲಾಗುತ್ತಿದೆ ಎಂಬ ಕಾಂಗ್ರೆಸ್ ಮುಖಂಡರ ಹೇಳಿಕೆ ಬಗ್ಗೆ ಕಿಡಿ ಕಾರಿದ ಅಶೋಕ್, ಧಮ್ಮು ತಾಕತ್ತು ಇದ್ದರೆ…