IPL: ಪಂಜಾಬ್ ವಿರುದ್ದ ಸೇಡು ತೀರಿಸಿಕೊಂಡ RCB; ದ್ವಿತಿಯಾರ್ಧದಲ್ಲಿ ಗೆಲುವಿನ ಅಭಿಯಾನ ಆರಂಭ

ಚಂಡೀಗಢ: ಐಪಿಎಲ್ ದ್ವಿತೀಯಾರ್ಧದ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಜಯಭೇರಿ ಭಾರಿಸಿದೆ. ಚಂಡೀಗಡದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ RCB 7 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿದೆ. ಚಂಡೀಗಢದ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾನುವಾರದ ಪಂದ್ಯ ರೋಚಕತೆಯಿಂದ ಕೂಡಿತ್ತು. ಪಂಜಾಬ್ ಕಿಂಗ್ಸ್ ನೀಡಿದ್ದ 158 ರನ್ ಗುರಿಯನ್ನು ಬೆನ್ನತ್ತಿದ ಆರ್ ಸಿಬಿ ತಂಡ 18.5 ಓವರ್ ನಲ್ಲೇ ಗುರಿ ಸಾಧಿಸಿತು. ಕೇವಲ 3 ವಿಕೆಟ್ ಕಳೆದುಕೊಂಡ RCB ಆರ್ ಸಿಬಿ ಪರ ದೇವದತ್ ಪಡಿಕ್ಕಲ್ ಮತ್ತು ವಿರಾಟ್ ಕೊಹ್ಲಿ ಅವರ ಶತಕದಾಟದ ನೆರವಿನೊಂದಿಗೆ 159 ರನ್ ಗಳಿಸಿ ಜಯಭೇರಿ ಭಾರಿಸಿತು. ವಿರಾಟ್ ಕೊಹ್ಲಿ ಅಜೇಯ 73 ರನ್ ಗಳಿಸಿದರೆ, ದೇವದತ್ ಪಡಿಕ್ಕಲ್ 35 ಎಸೆತಗಳಲ್ಲಿ 61 ರನ್ ಕಲೆಹಾಕಿದ್ದಾರೆ. ರಜತ್ ಪಟಿದಾರ್ 12 ರನ್ ಗಳಿಸಿದ್ದರೆ, ಜಿತೇಶ್…

IPL ದ್ವಿತೀಯಾರ್ಧ ಹಂತ.. RCBಗೆ ಮುಂದಿನ 4 ಗೆಲುವು ಅನಿವಾರ್ಯ

ಬೆಂಗಳೂರು : ತೀವ್ರ ಜಿದ್ದಾಜಿದ್ದಿನ ಐಪಿಎಲ್ ಅಖಾಡಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಕೂಡಾ ಕ್ರಿಕೆಟ್ ಅಭಿಮಾನಿಗಳ ಫೆವರೇಟ್ ತಂಡವಾಗಿದೆ. ಆದರೆ ತವರು ನೆಲದಲ್ಲೇ ಸತತ ಸೋಲುಂಡಿರುವ RCB ಇದೀಗ ನಾಲ್ಕು ಪಂದ್ಯಗಲ್ಲಷ್ಟೇ ಗೆಲುವು ಸಾಧಿಸಿದ್ದು ಪ್ಲೇಆಫ್​ಗೇರುವ ಸಾಧ್ಯತೆಗಳಿವೆಯೇ ಎಂಬ ಚಿಂತೆ ಅಭಿಮಾನಿಗಳನ್ನು ಕಾಡತೊಡಗಿದೆ. ಈ ಬಾರಿಯ ಐಪಿಎಲ್ ಸೆಣಸಾಟದ ಮೊದಲಾರ್ಧ ಪೂರ್ಣಗೊಳಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಇನ್ನು ಮುಂದೆ ದ್ವಿತೀಯಾರ್ಧವನ್ನು ಕ್ರಮಿಸಲಿದೆ. ಶುಕ್ರವಾರ ತನ್ನ ವಿರುದ್ಧ ಗೆದ್ದು ಬೀಗಿದ ಪಂಜಾಬ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈ ತಿಂಗಳ 20 ರಂದು ದ್ವಿತೀಯಾರ್ಧವನ್ನು ಆರಂಭಿಸಲಿದೆ. ಆರ್​ಸಿಬಿ ತಂಡಕ್ಕೆ ದ್ವಿತೀಯಾರ್ಧದಲ್ಲಿ 7 ಪಂದ್ಯಗಳ ಸವಾಲು ಇದ್ದು ಪ್ಲೇಆಫ್​ನಲ್ಲಿ ತನ್ನ ಸ್ಥಾನ ಖಚಿತಪಡಿಸಿಕೊಳ್ಳಲು 16 ಅಂಕಗಳ ಅವಶ್ಯಕತೆಯಿದೆ. ಸದ್ಯ 8 ಅಂಕಗಳನ್ನು ಪಡೆದಿರುವ ಆರ್​ಸಿಬಿ ತಂಡ ಈ ದ್ವಿತೀಯಾರ್ಧದಲ್ಲಿ 4 ಪಂದ್ಯಗಳನ್ನು…