ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಜನಿವಾರ ತೆಗೆಸಿರುವ ಘಟನೆ ಬಗ್ಗೆ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಕಳವಳ ವ್ಯಕ್ತಪಡಿಸಿದ್ದಾರೆ. ಅಧಿಕಾರಿಗಳ ಕೃತ್ಯವನ್ನು ಖಂಡಿಸಿರುವ ಅವರು ಮಾನ್ಯ ಉನ್ನತ ಶಿಕ್ಷಣ ಸಚಿವರಿಗೆ ಪತ್ರ ಬರೆದು, ಪರೀಕ್ಷಾ ಮಾರ್ಗಸೂಚಿಗಳಲ್ಲಿ ಕೆಲವೊಂದನ್ನು ಮಾರ್ಪಾಡು ಮಾಡಿ ಧಾರ್ಮಿಕ ಸ್ವಾತಂತ್ರ್ಯ ಕಾಪಾಡಲು ಅನುವು ಮಾಡಿಕೊಡಬೇಕೆಂದು ಸಲಹೆ ನೀಡಿದ್ದಾರೆ. CET ಪರೀಕ್ಷೆಯ ತಪಾಸಕರು, ವಿಧ್ಯಾರ್ಥಿಯ ಜನಿವಾರ ತೆಗೆಸಿರುವ ಪ್ರಕರಣವು ತೀವ್ರ ಆಘಾತ ಉಂಟು ಮಾಡಿದೆ. ಈ ಘಟನೆ ಆ ವಿದ್ಯಾರ್ಥಿಯ ಮನಸ್ಸನ್ನು ಎಷ್ಟು ಘಾಸಿಗೊಳಿಸಿರಬಹುದು ಎಂಬುದನ್ನು ಊಹಿಸಲಾಧ್ಯ. ಇದನ್ನು ಖಂಡಿಸುತ್ತೇನೆ ಎಂದವರು ಪತ್ರದಲ್ಲಿ ತಿಳಿಸಿದ್ದಾರೆ. ಈ ಪ್ರಕರಣದಲ್ಲಿ ಬಿಜೆಪಿಗರು ವಿನಾಕಾರಣ ರಾಜಕಾರಣಮಾಡುತ್ತಾ ಸಿದ್ದರಾಮಯ್ಯ ಸರ್ಕಾರದ ಕುರಿತು ಹಿಂದೂ ವಿರೋಧಿ ಎಂದು ಅಪಪ್ರಚಾರ ಮಾಡುತ್ತಿರುವುದು ಮತ್ತಷ್ಟು ಕಳವಳಕಾರಿ ಎಂದೂ ಅವರು ಹೇಳಿದ್ದಾರೆ. ಜನಿವಾರ ತೆಗೆಸುವುದು, ಮಾಂಗಲ್ಯ ತೆಗೆಸುವುದು( ಕಳೆದ ಬಾರಿಯ ಕೆ ಎ ಎಸ್…