ಬೆಂಗಳೂರು: ಯುವ ಕಾಂಗ್ರೆಸ್ ಚುನಾವಣೆ ಮುಗಿದಿದೆ. ಚುನಾವಣೆಯಲ್ಲಿ ಗೆದ್ದವರು, ಸೋತವರು ಎಲ್ಲರೂ ಒಗ್ಗಟ್ಟಾಗಿ ಸೈದ್ಧಾಂತಿಕವಾಗಿ ರಾಜಕೀಯ ಎದುರಾಳಿಗಳಾಗಿರುವ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ವಿರುದ್ಧ ಎಲ್ಲಾ ಬೂತ್ ಮಟ್ಟದಲ್ಲಿ ಹೋರಾಟ ಮಾಡಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ ನೀಡಿದ್ದಾರೆ. ಅರಮನೆ ಮೈದಾನದಲ್ಲಿ ಸೋಮವಾರ ನಡೆದ ‘ಯುವ ಸಂಕಲ್ಪ’ ಪದಗ್ರಹಣ ಕಾರ್ಯಕ್ರಮದಲ್ಲಿ ನೂತನ ಪದಾಧಿಕಾರಿಗಳಿಗೆ ಕೆಪಿಸಿಸಿ ಅಧ್ಯಕ್ಷರೂ ಆದ ಡಿ.ಕೆ. ಶಿವಕುಮಾರ್ ಪ್ರತಿಜ್ಞಾ ವಿಧಿ ಬೋಧಿಸಿದರು. ಈ ವೇಳೆ ಮಾತನಾಡಿದ ಶಿವಕುಮಾರ್, ಮಹಾತ್ಮಾ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಶತಮಾನೋತ್ಸವ ಆಚರಿಸಿದೆವು. ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲಾ ವರ್ಗದ ಜನನ ಅದಿಕಾರಕ್ಕೆ ಬಂದಂತೆ ಎಂದರು. ರಾಜಕೀಯದಲ್ಲಿ ಚುನಾವಣೆ ಗೆಲುವು ಸೋಲು ಸಹಜ. ಚುನಾವಣೆಯಲ್ಲಿ ಸ್ಪರ್ಧಿಸಿದವರೆಲ್ಲಾ ಗೆಲ್ಲಲು ಆಗುವುದಿಲ್ಲ. ಚುನಾವಣೆಯಲ್ಲಿ ಗೆದ್ದವರೆಲ್ಲಾ ನಾಯಕರಲ್ಲ.…
Tag: ಲಕ್ಷ್ಮೀ ಹೆಬ್ಬಾಳ್ಕರ್
ಸಚಿವೆ ಹೆಬ್ಬಾಳ್ಕರ್ ಪಿಎ ಕಿರುಕುಳಕ್ಕೆ ಅಧಿಕಾರಿ ಸಾವು ಪ್ರಕರಣ; ಅಧಿಕಾರಿಗಳು ನೆಮ್ಮದಿಯಿಂದ ಕೆಲಸ ಮಾಡುವ ವಾತಾವರಣ ಇಲ್ಲ ಎಂದು ಪ್ರತಿಪಕ್ಷ ಆಕ್ರೋಶ
ರಾಮನನಗರ: ಸಚಿವೆ ಹೆಬ್ಬಾಳ್ಕರ್ ಪಿಎ ಕಿರುಕುಳಕ್ಕೆ ಬೇಸತ್ತು ಅಧಿಕಾರಿ ಸಾವಿಗೆ ಶರಣಾಗಿದ್ದಾರೆ ಎಂಬ ಪ್ರಕರಣ ಬಗ್ಗೆ ಪ್ರತಿಪಕ್ಷ ಬಿಜೆಪಿ ಕಳವಳ ವ್ಯಕ್ತಪಡಿಸಿದೆ. ರಾಜ್ಯದಲ್ಲಿ ಅಧಿಕಾರಿಗಳು ನೆಮ್ಮದಿಯಿಂದ ಕೆಲಸ ಮಾಡುವ ವಾತಾವರಣ ಇಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ. ರಾಮನಗರ ಜಿಲ್ಲೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಖಾಡದಲ್ಲಿ ಎನ್ಡಿಎ ಅಭ್ಯರ್ಥಿ ಪರ ಪ್ರಚಾರ ಕೈಗೊಂಡ ಆರ್.ಅಶೋಕ್, ಅಧಿಕಾರಿ ಸಾವಿನ ಬಗ್ಗೆ ಪ್ರತಿಕ್ರಿಯೆ ನೀಡಿದರು. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕಿರುಕುಳ ತಾಳಲಾರದೆ ಅಧಿಕಾರಿ ಚಂದ್ರಶೇಖರನ್ ಆತ್ಮಹತ್ಯೆ ಮಾಡಿಕೊಂಡರು. ಇದೇ ರೀತಿ ಬೆಳಗಾವಿಯ ಸರ್ಕಾರಿ ಕಚೇರಿಯಲ್ಲಿ ಎಸ್ಡಿಎ ರುದ್ರಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಧಿಕಾರಿಗಳು ನೆಮ್ಮದಿಯಿಂದ ಕೆಲಸ ಮಾಡುವ ವಾತಾವರಣ ಸರ್ಕಾರಿ ಕಚೇರಿಗಳಲ್ಲಿ ಇಲ್ಲ. ಹಣ ನೀಡಿದರೆ ಮಾತ್ರ ಇಲ್ಲಿ ಬದುಕಲು ಸಾಧ್ಯ ಎಂದು ಟೀಕಿಸಿದರು. ಏನೇ ಕೇಳಿದರೂ ಎಸ್ಐಟಿ ರಚನೆ ಎಂದು ಹೇಳುತ್ತಾರೆ. ಯಾರು ಸತ್ತರೂ ಎಸ್ಐಟಿ…