ಸಿಪಿ ಯೋಗೇಶ್ವರ್ ಬಾವ ಮಹದೇವಯ್ಯ ಅವರ ಶವ ಪತ್ತೆ

ಚಾಮರಾಜನಗರ: ನಾಪತ್ತೆಯಾಗಿದ್ದ ಮಾಜಿ ಸಚಿವ ಸಿಪಿ ಯೋಗೇಶ್ವರ ಅವರ ಬಾವ ಮಹದೇವಯ್ಯ ಅವರ ಶವ ಪತ್ತೆಯಾಗಿದೆ. ಅವರನ್ನು ಕೊಲೆ ಮಾಡಿರುವ ಸಂಶಯ ವ್ಯಕ್ತವಾಗಿದೆ.

ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಚೆಕ್ಕೆರೆ ಗ್ರಾಮದ ತೋಟದ ಮನೆಯಿಂದ ಡಿಸೆಂಬರ್ 2ರಂದು ಮಹದೇವಯ್ಯ ನಾಪತ್ತೆಯಾಗಿದ್ದರು. ಅವರ ಕಾರು ಚಾಮರಾಜನಗರ ಜಿಲ್ಲೆಯ ಹನೂರು ಸಮೀಪದ ರಾಮಾಪುರದಲ್ಲಿ ಭಾನುವಾರ ಪತ್ತೆಯಾಗಿತ್ತು. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಪೊಲೀಸರು ರಾಮಾಪುರ ಕಾಡಿನಲ್ಲಿ ಶೋಧಕಾರ್ಯ ನಡೆಸಿದಾಗ ಮಹದೇವಯ್ಯ ಶವ ಇಂದು ಪತ್ತೆಯಾಗಿದೆ.

Related posts