ಕೋಟೆನಾಡಿನಲ್ಲಿ ಭೀಕರ ಅಪಘಾತ; ನಾಲ್ವರ ಸಾವು

ಚಿತ್ರದುರ್ಗ: ಕೋಟೆ ನಾಡು ಚಿತ್ರದುರ್ಗ ಸಮೀಪ ಭಾನುವಾರ ಬೆಳಿಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ.

ಚಿತ್ರದುರ್ಗ ಹೊರವಲಯದ ಮಲ್ಲಾಪುರ ಮೇಲ್ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಕಾರು ಹಾಗೂ ಲಾರಿ ನಡುವೆ ಈ ಭೀಕರ ಅಪಘಾತ ಸಂಭವಿಸಿದೆ.  8 ವರ್ಷದ ಮಗು ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು ಮೂವರು ಗಂಭೀರವಾಗಿ ಗಾಯೊಂದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಹೊಸಪೇಟೆಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಲಾರಿಗೆ ಕಾರು ಹಿಂಬದಿಯಿಂದ ಡಿಕ್ಕಿ‌ ಹೊಡೆದಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಪರಶುರಾಮ್ ಮಾಹಿತಿ ನೀಡಿದ್ದಾರೆ. ಸಾವನ್ನಪ್ಪಿದವರನ್ನು ವಿಜಯಪುರ ನಿವಾಸಿಗಳಾದ ಭೀಮಾಶಂಕರ (26 ವರ್ಷ), ಕಾರು ಚಾಲಕ ಸಂಗನ ಬಸಪ್ಪ (36 ವರ್ಷ), ರೇಖಾ  (29 ವರ್ಷ), ಅಗಸ್ತ್ಯ (8 ವರ್ಷ) ಎಂದು ಗುರುತಿಸಲಾಗಿದೆ. ಸಂಗನ ಬಸಪ್ಪ ಅವರ ಮಕ್ಕಳಾದ 6 ವರ್ಷದ ಅನ್ವಿತಾ, 4 ವರ್ಷದ ಆದರ್ಶ ಹಾಗೂ ಸಂಬಂಧಿ ಭೀಮಾ ಶಂಕರ್ (26) ಎಂಬವರು ಗಾಯಗೊಂಡಿದ್ದಾರೆ. ಇವರು ಕುಟುಂಬ ಸಮೇತರಾಗಿ ಚಿಕ್ಕಮಗಳೂರಿಗೆ ಪ್ರವಾಸ ತೆರಳುತ್ತಿದ್ದರು ಎನ್ನಲಾಗಿದೆ.

Related posts