ಪರಿಷತ್ ನಾಮಕರಣ; ಉಮಾಶ್ರೀ, ಸೀತಾರಾಮ್, ಸುಧಾಮ್ ದಾಸ್ ಹೆಸರು ಫೈನಲ್

ಬೆಂಗಳೂರು: ವಿಧಾನ ಪರಿಷತ್ತಿನ ಖಾಲಿ ಇರುವ ಸ್ಥಾನಗಳಿಗೆ ನಾಮ ನಿರ್ದೇಶನ ಮಾಡುವ ಪ್ರಕ್ರಿಯೆ ಇದೀಗ ರೋಚಕ ಘಟ್ಟ ತಲುಪಿದೆ. ಪರಿಷತ್ತಿನ ಮೂರು ನಾಮನಿರ್ದೇಶನ ಸ್ಥಾನಗಳಿಗೆ ಮಾಜಿ ಸಚಿವೆ ಉಮಾಶ್ರೀ ಎಂ.ಆರ್. ಸೀತಾರಾಮ್ ಹಾಗೂ ನಿವೃತ್ತ ಇಡಿ ಅಧಿಕಾರಿ ಸುಧಾಮ್ ದಾಸ್ ಹೆಸರನ್ನು ಅಂತಿಮಗೊಳಿಸಿರುವ ಸರ್ಕಾರ ಪಟ್ಟಿಯನ್ನು ರಾಜ್ಯಪಾಲರಿಗೆ ರವಾನಿಸಿದೆ.

ಉಮಾಶ್ರೀ ಅವನ್ನು ಕಲಾವಿದರ ಕೋಟಾದಡಿ ಪರಿಗಣಿಸಿದರೆ, ಎಂ.ಆರ್.ಸೀತಾರಾಮ್ ಅವರನ್ನು ಶಿಕ್ಷಣ ಕ್ಷೇತ್ರದ ಕೋಟಾದಡಿ ಪರಿಗಣಿಸಲಾಗಿದೆ. ಹಾಗೂ ಸುಧಾಮ್ ದಾಸ್ ಅವರನ್ನು ಸಮಾಜಸೇವೆ ಹೆಸರಲ್ಲಿ ಪರಿಗಣಿಸಿ ನಾಮನಿರ್ದೇಶನ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರು ರಾಜ್ಯಪಾಲರಿಗೆ ಶಿಫಾರಸು ಮಾಡಿದ್ದಾರೆ.

Related posts