ವಿಜಯಪುರ ಕಾರ್ಖಾನೆ ದುರಂತ; ಮೃತ ಕಾರ್ಮಿಕರ ಕುಟುಂಬದವರಿಗೆ 7 ಲಕ್ಷ ರೂಪಾಯಿ ಪರಿಹಾರ

ಬೆಂಗಳೂರು: ವಿಜಯಪುರ ಕಾರ್ಖಾನೆ ದುರಂತ; ಮೃತ ಕಾರ್ಮಿಕರ ಕುಟುಂಬದವರಿಗೆ 7 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಸಚಿವ ಎಂ.ಬಿ.ಪಾಟೀಲ್ ಪ್ರಕಟಿಸಿದ್ದಾರೆ. ಮೃತಪಟ್ಟ ಕಾರ್ಮಿಕರ ಕುಟುಂಬದವರಿಗೆ ಕಾರ್ಖಾನೆ ಮಾಲೀಕರಿಂದ 5 ಲಕ್ಷ ಹಾಗೂ ಸರ್ಕಾರದಿಂದ 2 ಲಕ್ಷ ರೂಪಾಯಿ ಪರಿಹಾರ ನೀಡಲಾಗುತ್ತದೆ ಎಂದವರು ತಿಳಿಸಿದ್ದಾರೆ.

ವಿಜಯಪುರ ನಗರದ ಹೊರವಲಯದ ಅಲಿಯಾಬಾದ ಕೈಗಾರಿಕೆ ಪ್ರದೇಶದಲ್ಲಿ ರಾಜಗುರು ಮೆಕ್ಕೆಜೋಳ‌ ಸಂಸ್ಕರಣೆ ಘಟಕದಲ್ಲಿ ಸಂಭವಿಸಿದ ಅವಘಡದಲ್ಲಿ 7 ಕಾರ್ಮಿಕರು ಮೃತಪಟ್ಟಿದ್ದು, ಅವರ ಕುಟುಂಬದವರಿಗೆ ನನ್ನ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿ ನೋವು ಹಂಚಿಕೊಂಡಿರುವ ಎಂ.ಬಿ.ಪಾಟೀಲ್, ಶೀಘ್ರ ರಕ್ಷಣಾ ಕಾರ್ಯ ಕೈಗೊಂಡರೂ ಸಹ ಬೃಹತ್ ರಾಶಿಯಡಿ ಸಿಲುಕಿದ್ದ ಪರಿಣಾಮ ಅವರನ್ನು ಬದುಕಿಸಲಾಗಲಿಲ್ಲ ಎಂದು ವಿಷಾದಿಸಿದ್ದಾರೆ.

ಮೃತರೆಲ್ಲರೂ ಬಿಹಾರ ರಾಜ್ಯದವರಾಗಿದ್ದು, ಅವರ ಕುಟುಂಬದವರೊಡನೆ ಈಗಾಗಲೆ ಸಂಪರ್ಕದಲ್ಲಿದ್ದು ಮೃತದೇಹಗಳನ್ನು ವಿಮಾನದ ಮೂಲಕ ಪಾಟ್ನಾಗೆ ಸಾಗಿಸಿ ಅಲ್ಲಿಂದ ಅವರ ಮನೆಗಳಿಗೆ ತಲುಪಿಸಲಾಗುವುದು ಎಂದ ಸಚಿವರು, ರಕ್ಷಣಾ ಕಾರ್ಯದ ಸಂದರ್ಭದಲ್ಲಿ ನಾನು ಸ್ವತಃ ಅಲ್ಲಿದ್ದು, ಪರಿಸ್ಥಿತಿಯು ಕ್ಲಿಷ್ಟವಾಗಿತ್ತು. ರಾತ್ರಿಯಿಡೀ ನಡೆದ ಕಾರ್ಯಾಚರಣೆಯಲ್ಲಿ ಶ್ರಮಿಸಿದ ನಮ್ಮ ಎಲ್ಲಾ ಎಸ್.ಡಿ.ಆರ್.ಎಫ್., ಎನ್.ಡಿ.ಆರ್.ಎಫ್., ಅಗ್ನಿಶಾಮಕ, ಪೊಲೀಸ್ ಹಾಗೂ ಜಿಲ್ಲಾಡಳಿತ ತಂಡದವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. .

Related posts