ಮತ್ತೆ ಎತ್ತಿನಹೊಳೆ ಸದ್ದು; ಮಾ.18 ರಂದು ರಾಜ್ಯದ ನಿಯೋಗ ದೆಹಲಿಗೆ

ಬೆಂಗಳೂರು: ಎತ್ತಿನ ಹೊಳೆ ಇದೀಗ ಮತ್ತೆ ಸುದ್ದಿಯ ಮುನ್ನೆಲೆಗೆ ಬಂದಿದೆ ಎತ್ತಿನಹೊಳೆ ಕಾಮಗಾರಿ ಸಲುವಾಗಿ ಅರಣ್ಯ ಭೂಮಿ ಬಳಕೆಗೆ ಅನುಮತಿ ಕೇಳಲು ಮಾ.18 ರಂದು ರಾಜ್ಯದ ನಿಯೋಗ ದೆಹಲಿಗೆ ತೆರಳಲಿದೆ.

ಈ ಸಂಬಂಧ ಮಾಹಿತಿ ಹಂಚಿಕೊಂಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಮಾ.18 ರಂದು ತಾವು ದೆಹಲಿಗೆ ತೆರಳಿ ಕೇಂದ್ರದ ನಾಯಕರ ಜೊತೆ ಮಾತುಕತೆ ನಡೆಸುವುದಾಗಿ ತಿಳಿಸಿದ್ದಾರೆ.

ಕೇಂದ್ರ ಪರಿಸರ ಇಲಾಖೆಯಿಂದ ಅನುಮತಿ ದೊರೆಯದ ತನಕ ಎತ್ತಿನಹೊಳೆ ಕಾಮಗಾರಿ ಮುಂದುವರೆಸಲು ಕಷ್ಟ. 508 ಎಕರೆ 1 ಗುಂಟೆ ವಿಸ್ತೀರ್ಣದ ಅರಣ್ಯ ಭೂಮಿ ಬಳಕೆಗೆ ದೆಹಲಿಗೆ ತೆರಳಿ ಕೇಂದ್ರ ಪರಿಸರ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಎಲ್ಲಾ ಅಡೆತಡೆಗಳನ್ನು ನಿವಾರಿಸಿ ತುಮಕೂರಿಗೆ ನೀರು ತಂದು, ಚಿಕ್ಕಬಳ್ಳಾಪುರಕ್ಕೆ ನೀರು ತರಲಾಗುವುದು ಎಂದು ಡಿಕೆಶಿ ಭರವಸೆ ನೀಡಿದರು.

Related posts