‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಗೆ ತೆಲಂಗಾಣ ರಾಜಕಾರಣಿಗಳ ವಿಶೇಷ ನೆರವು

ಹೈದರಾಬಾದ್: ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆಗೆ ತೆಲಂಗಾಣದ ರಾಜಕಾರಣಿಗಳು ವಿಶೇಷ ನೆರವನ್ನು ಘೋಷಿಸಿದ್ದಾರೆ. ಆಪರೇಷನ್ ಸಿಂಧೂರ ಕಾರ್ಯಾಚರಣೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ರಕ್ಷಣಾ ನಿಧಿಗೆ ಕಾಂಗ್ರೆಸ್ ಶಾಸಕರು ಒಂದು ತಿಂಗಳ ಸಂಬಳವನ್ನು ದೇಣಿಗೆ ನೀಡಲು ಮುಂದಾಗಿದ್ದಾರೆ. ಶಾಸಕರ ಈ ಪ್ರಸ್ತಾಪವನ್ನು ಪರಿಗಣಿಸುತ್ತಿರುವುದಾಗಿ ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿಟೀಕಿಸಿದ್ದಾರೆ.

ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವ ಮುಖ್ಯಮಂತ್ರಿ ರೇವಂತ್ ರೆಡ್ಡಿ ಇತರ ಪಕ್ಷಗಳ ಶಾಸಕರು ಸಹ ಒಂದು ತಿಂಗಳ ವೇತನವನ್ನು ದೇಣಿಗೆ ನೀಡುವ ನಿರೀಕ್ಷೆ ಇದೆ. ಈ ಸಂಬಂಧ ಅವರಿಗೆ ಮನವಿ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

Related posts