ಬಸ್ ಧಗಧಗಿಸಿ ಹೊತ್ತಿಉರಿದ ಬಸ್; ಸಾವಿನ ಸಂಖ್ಯೆ ಕ್ಕೆ ಏರಿಕೆ

ಜೈಸಲ್ಮೇರ್‌: ಜೈಸಲ್ಮೇರ್-ಜೋಧಪುರ ಹೆದ್ದಾರಿಯ ಥೈಯಾತ್ ಗ್ರಾಮದ ಬಳಿ ಪ್ರಯಾಣಿಕರಿದ್ದ ಬಸ್ ಧಗಧಗಿಸಿ ಹೊತ್ತಿಉರಿದಿದೆ. ಈ ಘಟನೆಯಲ್ಲಿ ಸಾವನ್ನಪಿದವರ ಸಂಖ್ಯೆ 15 ಕ್ಕೇರಿದೆ.

ಜೈಸಲ್ಮೇರ್-ಜೋಧಪುರ ಹೆದ್ದಾರಿಯ ಥೈಯಾತ್ ಗ್ರಾಮದ ಬಳಿ ಮಧ್ಯಾಹ್ನ 3:30ರ ಸುಮಾರಿಗೆ ರಾಜಸ್ಥಾನದ ಜೈಸಲ್ಮೇರ್‌ನಿಂದ ಜೋಧಪುರಕ್ಕೆ ಹೋಗುತ್ತಿದ್ದ ಖಾಸಗಿ ಬಸ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿತ್ತು. ಸ್ವಲ್ಪ ಹೊತ್ತಿನಲ್ಲೇ ಬಸ್ ಹೊತ್ತಿ ಉರಿದಿದೆ. ದುರಂತದಲ್ಲಿ ಮೂವರು ಮಕ್ಕಳು, ನಾಲ್ವರು ಮಹಿಳೆಯರು ಸೇರಿದಂತೆ ಸುಮಾರು 15 ಪ್ರಯಾಣಿಕರು ಮೃತಪಟ್ಟಿದ್ದಾರೆ. ಈ ಬಸ್ಸಿನಲ್ಲಿ ಸುಮಾರು 57 ಪ್ರಯಾಣಿಕರು ಬಸ್‌ನಲ್ಲಿದ್ದರು ಎನ್ನಲಾಗಿದೆ. ಭೀಕರ ದುರಂತದಲ್ಲಿ 15ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts